ಕೆಎಎಸ್ ಅಧಿಕಾರಿಗಳ ವರ್ಗಾವಣೆ
Update: 2018-03-12 21:55 IST
ಬೆಂಗಳೂರು, ಮಾ.12: ರಾಜ್ಯ ಸರಕಾರವು ಇಬ್ಬರು ಕೆಎಎಸ್ ಅಧಿಕಾರಿಗಳನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.
ಡಾ.ಎಂ.ಮಹೇಶ್-ನಿರ್ದೇಶಕರು(ಆಪರೇಷನ್), ಕರ್ನಾಟಕ ವಿದ್ಯುನ್ಮಾನ ಅಭಿವೃದ್ಧಿ ನಿಗಮ(ಕಿಯೋನಿಕ್ಸ್), ಆರ್.ಲೋಕನಾಥ್-ಉಪ ಆಯುಕ್ತರು(ಅಭಿವೃದ್ಧಿ), ಬೆಳಗಾವಿ ಮಹಾನಗರ ಪಾಲಿಕೆಗೆ ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.