ಎಐಸಿಸಿ ಸದಸ್ಯರಾಗಿ ಕವಿತಾ ಸನಿಲ್ ನೇಮಕ

Update: 2018-03-13 18:05 GMT

ಮಂಗಳೂರು,ಮಾ.13: ಅಖಿಲ ಭಾರತ ಕಾಂಗ್ರೆಸ್ ಸಮಿತಿ (ಎಐಸಿಸಿ) ಸದಸ್ಯರಾಗಿ ಮಂಗಳೂರು ಮಹಾನಗರ ಪಾಲಿಕೆ ನಿಕಟಪೂರ್ವ ಮೇಯರ್ ಕವಿತಾ ಸನಿಲ್ ನೇಮಕವಾಗಿದ್ದಾರೆ.

ಕವಿತಾ ಸನಿಲ್ ಅವರು ಮನಪಾ ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ನಗರ ಯೋಜನಾ ಸ್ಥಾಯಿ ಸಮಿತಿ ಅಧ್ಯಕ್ಷರಾಗಿ, ರಾಜ್ಯ ಮಹಿಳಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ, ಮಂಗಳೂರು ಮಹಾನಗರದ ಮೇಯರ್ ಹುದ್ದೆ ಅಲಂಕರಿಸಿದ್ದರು.

ಇವರ ಕಾರ್ಯವೈಖರಿಗೆ ಪಕ್ಷದ ಹಿರಿಯ ಮುಖಂಡರು ಶ್ಲಾಘನೆ ವ್ಯಕ್ತಪಡಿಸಿ ಇದೀಗ ಎಐಸಿಸಿ ಸದಸ್ಯರಾಗಿ ನೇಮಕಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News