ಕುಂತೂರು: ಬೈಕ್ ಅಪಘಾತಕ್ಕೀಡಾಗಿ ಶಾಲಾ ಬಾಲಕನಿಗೆ ಗಂಭೀರ ಗಾಯ

Update: 2018-03-14 07:55 GMT

ಕಡಬ, ಮಾ.14: ಬೈಕೊಂದು ಸ್ಕಿಡ್ ಆಗಿ ಉರುಳಿ ಬಿದ್ದ ಪರಿಣಾಮ ಬಾಲಕನೋರ್ವ ಗಂಭೀರ ಗಾಯಗೊಂಡ ಘಟನೆ ಕುಂತೂರಿನ ಪೆರಾಬೆ ಎಂಬಲ್ಲಿ ಬುಧವಾರ ನಡೆದಿದೆ.

ಪೆರಾಬೆ ಗ್ರಾಮದ ಪಾಲೆಚಾರು ನಿವಾಸಿ ವಿಶ್ವನಾಥ ಗೌಡ ಎಂಬವರ ಪುತ್ರ ಪೆರಾಬೆ ಶಾಲೆಯ ಒಂದನೇ ತರಗತಿಯ ವಿದ್ಯಾರ್ಥಿ ಜಯಕುಮಾರ್ ಗಾಯಾಳು ಬಾಲಕ. ಈತ ತನ್ನ ತಂದೆಯೊಂದಿಗೆ ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದ ವೇಳೆ ಪೆರಾಬೆ ಬಳಿ ಬೈಕ್ ಸ್ಕಿಡ್ ಆಗಿ ಉರುಳಿಬಿದ್ದಿದೆ.

ಮಗುವಿಗೆ ಕಡಬ ಸಮುದಾಯ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ, ಹೆಚ್ಚಿನ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News