ಬಿ.ಸಿ.ರೋಡ್ : ಡಾ. ರೇಣುಕಾ ಪ್ರಸಾದ್ ಅವರಿಗೆ ಸನ್ಮಾನ

Update: 2018-03-15 13:42 GMT

ಬಂಟ್ವಾಳ, ಮಾ. 15: ಮಂಗಳೂರು ಸಹಾಯಕ ಆಯುಕ್ತ ಡಾ. ರೇಣುಕಾ ಪ್ರಸಾದ್ ಅವರು ವರ್ಗಾವಣೆಗೊಂಡ ಹಿನ್ನೆಲೆಯಲ್ಲಿ ಬಂಟ್ವಾಳ ತಾಲೂಕು ಗ್ರಾಮಕರಣಿಕರ ಸಂಘದ ವತಿಯಿಂದ ಗುರುವಾರ ಸಂಜೆ ಸನ್ಮಾನಿಸಲಾಯಿತು.

ಕಂದಾಯ ನಿರೀಕ್ಷಕ ರಾಮ ಕಾಟಿಪಳ್ಳ ಮಾತನಾಡಿ, ಎ.ಸಿ. ರೇಣುಕಾ ಪ್ರಸಾದ್ ಅವರ ಕಾರ್ಯದಕ್ಷತೆ, ಕರ್ತವ್ಯ ಪ್ರಜ್ಞೆ ಹಾಗೂ ಕ್ರಿಯಾಶೀಲತೆ ಎಲ್ಲರಿಗೂ ಮಾದರಿ. ಸರಕಾರಿ ಕೆಲಸ ದೇವರ ಕೆಲಸ ಎಂದು ನಂಬಿಕೊಂಡು ಕರ್ತವ್ಯ ನಿರ್ವಹಿಸಿ ಸಾರ್ವಜನಿಕ ವಲಯದಲ್ಲಿ ಜನಸ್ನೇಹಿಯಾಗಿದ್ದಾರೆ ಎಂದು ಹೇಳಿದರು.
ಉಪ ತಹಶೀಲ್ದಾರ್‍ಗಳಾದ ರಾಜೇಶ್ ನಾಯ್ಕ್, ಸೀತಾರಾಮ, ಗ್ರೆಟ್ಟಾ ಮಸ್ಕರೇಂಜಸ್, ಕಂದಾಯ ನಿರೀಕ್ಷಕ ದಿವಾಕರ್ ಮುಗುಳಿಯ, ನವೀನ್ ಬೆಂಜನಪದವು ಮತ್ತಿತರರು ಹಿರಿಯ ಅಧಿಕಾರಿಗಳಿಗೆ ಶುಭ ಹಾರೈಸಿದರು. 

ಗ್ರಾಮಕರಣಿಕರು, ತಾಲೂಕು ಕಚೇರಿ ಸಿಬ್ಬಂದಿ ಹಾಗೂ ಗ್ರಾಮ ಸಹಾಯಕರು ಈ ಸಂದರ್ಭದಲ್ಲಿ ಹಾಜರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News