ಬಿಐಟಿಯಲ್ಲಿ ರಾಷ್ಟ್ರೀಯ ವಿಜ್ಞಾನ ದಿನಾಚರಣೆ

Update: 2018-03-16 11:32 GMT

ಮಂಗಳೂರು, ಮಾ.16: ಬ್ಯಾರೀಸ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಮಂಗಳೂರು ಇದರ ಪ್ರಥಮ ವರ್ಷದ ವಿಭಾಗದ ಅಧ್ಯಾಪಕರು ಮತ್ತು ವಿದ್ಯಾರ್ಥಿಗಳು ಸೇರಿ ರಾಷ್ಟೀಯ ವಿಜ್ಞಾನ ದಿನಾಚರಣೆಯನ್ನು ಗುರುವಾರ ಕಾಲೇಜಿನ ಕ್ಯಾಂಪಸ್‌ನಲ್ಲಿ ಆಚರಿಸಿಲಾಯಿತು.

ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿದ ಮಂಗಳೂರು ವಿಶ್ವವಿದ್ಯಾನಿಲಯದ ಕುಲಸಚಿವ ಡಾ.ಎಎಂ.ಖಾನ್, ತಂತ್ರಜ್ಞಾನದಲ್ಲಿ ವಿಜ್ಞಾನದ ಮಹತ್ವ, ತಾಂತ್ರಿಕ ಕ್ಷೇತ್ರದಲ್ಲಿ ಆದ ಮಹತ್ವದ ಬೆಳವಣಿಗೆ ಹಾಗೂ ತಂತ್ರಜ್ಞಾನದ ಒಳಿತು ಕೆಡುಕುಗಳನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು.

ಪ್ರಥಮ ವರ್ಷದ ವಿಭಾಗದ ಮುಖ್ಯಸ್ಥ ಡಾ.ಅಂಜುಮ್ ಖಾನ್, ಪ್ರಾಂಶುಪಾಲ ಡಾ ಆ್ಯಂಟೋನಿ ಮಾತನಾಡಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕಿ ಪ್ರೊ.ವಿನುತಾ ಮುಖ್ಯ ಅತಿಥಿಗಳನ್ನು ಪರಿಚಯಿಸಿದರು.ಕಾರ್ಯಕ್ರಮದಲ್ಲಿ ಬಿಐಟಿ ಪಾಲಿಟೆಕ್ನಿಕ್ ಪ್ರಾಂಶುಪಾಲ ಡಾ.ಅಝೀಝ್ ಮುಸ್ತಫಾ ಮತ್ತು ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು. ರಸಾಯನ ಶಾಸ್ತ್ರ ವಿಭಾಗದ ಉಪನ್ಯಾಸಕ ಪ್ರೊ.ಇಮ್ರಾನ್ ಅಹ್ಮದ್ ವಿಜೇತರ ಹೆಸರನ್ನು ಘೋಷಿಸಿದರು. ಮುಖ್ಯ ಅತಿಥಿಗಳು ಬಹುಮಾನಗಳನ್ನು ವಿತರಿಸಿದರು.

ಪ್ರೊ.ಝಮೀಲ್ ಅಹ್ಮದ್ ಸ್ವಾಗತಿಸಿದರು. ವಿದ್ಯಾರ್ಥಿಗಳನ್ನು ಸಮ್ರನಾಝ್ ವಂದಿಸಿದರು. ವಿದ್ಯಾರ್ಥಿ ಸುನೆಹ್ರ ಮರಿಯಮ್ ಕಾರ್ಯಕ್ರಮ ನಿರ್ವಹಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News