ಕರ್ನಾಟಕದಲ್ಲಿ ಬಿಜೆಪಿ ಅಧಿಕಾರಕ್ಕೆ: ಜಾರ್ಕಂಡ್ ಸಂಸದ ಮಹೇಶ್ ಪೊದ್ದರ್ ವಿಶ್ವಾಸ

Update: 2018-03-17 17:45 GMT

ಮದ್ದೂರು, ಮಾ.17: ಪಟ್ಟಣದ ಮದ್ದೂರಮ್ಮ ಸಮುದಾಯ ಭವನದಲ್ಲಿ ಶನಿವಾರ ಮದ್ದೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ವಿಶೇಷ ಸಮಾವೇಶ ನಡೆಯಿತು. 

ಸಮಾವೇಶ ಉದ್ಘಾಟಿಸಿ ಮಾತನಾಡಿದ ಝಾರ್ಕಂಡ್ ಸಂಸದ ಮಹೇಶ್ ಪೊದ್ದರ್, ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರುವ ನಿಟ್ಟಿನಲ್ಲಿ ವಿಶೇಷ ಸಮಾವೇಶ ನಡೆಸಲಾಗುತ್ತಿದೆ ಎಂದರು.

ಉತ್ತರಪ್ರದೇಶ, ತ್ರಿಪುರ ಸೇರಿದಂತೆ ಹಲವು ರಾಜ್ಯಗಳಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವಂತೆ ರಾಜ್ಯದ ಜನತೆಯೂ ಬಿಜೆಪಿ ಅಧಿಕಾರಕ್ಕೆ ತರಲಿದ್ದಾರೆ. ಇದಕ್ಕೆ ಕಾರ್ಯಕರ್ತರು ಸಂಘಟನೆ ಮಾಡಬೇಕು ಎಂದು ಅವರು ಹೇಳಿದರು.

ಮಾಜಿ ಸಂಸದೆ ತೇಜಸ್ವಿನಿ ರಮೇಶ್, ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷ ಅಬ್ದುಲ್ ಅಜಿಂ, ಜಿಲ್ಲಾ ಉಸ್ತುವಾರಿ ಸತೀಶ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ವಿಜಯಕುಮಾರ್, ತಾಲೂಕು ಅಧ್ಯಕ್ಷ ಲಕ್ಷ್ಮಣ್‍ಕುಮಾರ್, ಕಾರ್ಯದರ್ಶಿಗಳಾದ ಜಿ.ಸಿ.ಮಹೇಂದ್ರ, ಎಂ.ಸಿ.ಸಿದ್ದು, ಜಿಲ್ಲಾ ಪರಿಶಿಷ್ಟ ಮೋರ್ಚಾ ಅಧ್ಯಕ್ಷ ಕೆಂಪುಬೋರಯ್ಯ, ರೂಪ ಇತರ ಮುಖಂಡರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News