ನೀರಿನಲ್ಲಿ ಮುಳುಗಿ ಬಾಲಕ ಮೃತ್ಯು

Update: 2018-03-18 18:11 GMT

ಭಟ್ಕಳ,ಮಾ.18: ಶರಾಬಿ ನದಿಯಲ್ಲಿ ಅಕಸ್ಮಿಕವಾಗಿ ಕಾಲು ಜಾರಿಬಿದ್ದ ಪರಿಣಾಮ ಬಾಲಕನೋರ್ವ ಮೃತಪಟ್ಟ ಘಟನೆ ರವಿವಾರ ನಡೆದಿದೆ.
ಮೃತ ಬಾಲಕನನ್ನು ಮಾವಿನ ಕುರ್ವೆ ಪಂಚಾಯತ್ ವ್ಯಾಪ್ತಿಯ ಬೆಳ್ನಿಯ ಅಜಯ ನರಸಿಂಗ ಮೊಗೇರ್(9) ಎಂದು ಗುರುತಿಸಲಾಗಿದೆ. 

ಯುಗಾದಿ ಹಬ್ಬದ ಊಟ ಸೇವಿಸಿ ಸ್ನೇಹಿತರೊಂದಿಗೆ ಶರಾಬಿ ನದಿ ದಡದಲ್ಲಿ ಆಟವಾಡುತ್ತಿದ್ದಾಗ ಅಕಸ್ಮಿಕವಾಗಿ ಕಾಲುಜಾರಿ ಬಿದ್ದು ಈ  ಘಟನೆ ಸಂಭವಿಸಿದೆ ಎಂದು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News