ಮೇವು ಹಗರಣ : ನಾಲ್ಕನೇ ಪ್ರಕರಣದಲ್ಲೂ ಲಾಲು ಪ್ರಸಾದ್ ದೋಷಿ

Update: 2018-03-19 08:43 GMT

ರಾಂಚಿ, ಮಾ.19:  ಆರ್ ಜೆಡಿ ಮುಖ್ಯಸ್ಥ ಲಾಲು ಪ್ರಸಾದ್ ಯಾದವ್ ಅವರು ಮೇವು ಹಗರಣದ ನಾಲ್ಕನೇ ಪ್ರಕರಣದಲ್ಲೂ ದೋಷಿ ಎಂದು ರಾಂಚಿಯ ವಿಶೇಷ ಸಿಬಿಐ ನ್ಯಾಯಾಲಯ ತೀರ್ಪು ನೀಡಿದೆ.

ಇದೇ ವೇಳೆ ಮಾಜಿ ಮುಖ್ಯ ಮಂತ್ರಿ ಜಗನ್ನಾಥ್ ಮಿಶ್ರಾ ಅವರನ್ನು ನ್ಯಾಯಾಲಯ ದೋಷ ಮುಕ್ತಗೊಳಿಸಿದೆ.
ಜಾರ್ಖಂಡ್ ನ ದುಮ್ಕಾ  ಖಜಾನೆಯಿಂದ ಅಕ್ರಮವಾಗಿ  3.13 ಕೋಟಿ ರೂ. ವಿಥ್ ಡ್ರಾ  ಮಾಡಿದ ಪ್ರಕರಣದಲ್ಲಿ ಲಾಲು ಪ್ರಸಾದ್ ಯಾದವ್ ಆರೋಪಿಯಾಗಿದ್ದರು.

ಲಾಲು ಪ್ರಸಾದ್ ಯಾದವ್ ಅವರು  ಮೇವು ಹಗರಣದಲ್ಲಿ  ಈಗಾಗಲೇ ಜೈಲು ಪಾಲಾಗಿದ್ದಾರೆ 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News