ಮದ್ರಸಗಳಲ್ಲಿ ಮಕ್ಕಳ ರಕ್ಷಣಾ ಸಮಿತಿ ರಚಿಸಲು ಸೂಚನೆ
Update: 2018-03-19 12:14 GMT
ಮಂಗಳೂರು, ಮಾ.19: ಕರ್ನಾಟಕ ರಾಜ್ಯ ಮಕ್ಕಳ ರಕ್ಷಣಾ ನೀತಿ-2016ರ ಪ್ರಕಾರ ಜಿಲ್ಲಾಧಿಕಾರಿಯ ಆದೇಶದ ಮೇರೆಗೆ ದ.ಕ. ಜಿಲ್ಲೆಯ ಎಲ್ಲ ವಕ್ಫ್ ಸಂಸ್ಥೆಯ ಮದ್ರಸಗಳಲ್ಲಿ ಕಡ್ಡಾಯವಾಗಿ ಸಲಹಾ ಪೆಟ್ಟಿಗೆ ಹಾಗೂ ಮಕ್ಕಳ ರಕ್ಷಣಾ ಸಮಿತಿಯನ್ನು ರಚಿಸಿ ಹಾಗೂ ಮಕ್ಕಳ ಸಹಾಯವಾಣಿ ಸಂಖ್ಯೆ(1098)ಯನ್ನು ಸಂಸ್ಥೆಗಳಲ್ಲಿ ನಮೂದಿಸಲು ಹಾಗೂ ದೂರು ಪೆಟ್ಟಿಗೆಯನ್ನು ಕಡ್ಡಾಯವಾಗಿ ತೆರೆದು ಜಿಲ್ಲಾ ವಕ್ಫ್ ಕಚೇರಿಗೆ ಅಗತ್ಯವಾಗಿ ವರದಿ ಸಲ್ಲಿಸಬೇಕು ಎಂದು ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಹಾಜಿ ಯು.ಕೆ. ಮೋನು ಕಣಚೂರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.