×
Ad

ಮಾ.20: ಮುಖ್ಯಮಂತ್ರಿಗಳ ಅವಿಭಜಿತ ದ.ಕ.ಜಿಲ್ಲಾ ಪ್ರವಾಸ

Update: 2018-03-19 18:26 IST

ಮಂಗಳೂರು, ಮಾ.19: ಮುಖ್ಯಮಂತ್ರಿ ಸಿದ್ದರಾಮಯ್ಯ ಮಾ.20ರಂದು ಅವಿಭಜಿತ ದ.ಕ.ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ. ಬೆಳಗ್ಗೆ 10:20ಕ್ಕೆ ಮಂಗಳೂರು ವಿಮಾನ ನಿಲ್ದಾಣಕ್ಕೆ ಆಗಮಿಸುವ ಮುಖ್ಯಮಂತ್ರಿ 11:15ಕ್ಕೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಅವರಿಗೆ ಸ್ವಾಗತ, 11:30ಕ್ಕೆ ಬಜ್ಪೆವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಉಡುಪಿ ಜಿಲ್ಲೆಯ ತೆಂಕ ಎರ್ಮಾಳ್‌ಗೆ ತೆರಳಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗವಹಿಸಲಿದ್ದಾರೆ.
 
ಅಪರಾಹ್ನ 3:30ಕ್ಕೆ ಮೂಲ್ಕಿಯಲ್ಲಿ ರೋಡ್ ಶೋ ಕಾರ್ಯಕ್ರಮ, ಸಂಜೆ 4:20ಕ್ಕೆ ಸುರತ್ಕಲ್ನಲ್ಲಿ ರೋಡ್ ಶೋ-ಸಾರ್ವಜನಿಕ ಸಭೆ, 5:20ಕ್ಕೆ ನಗರದ ಜ್ಯೋತಿ ಅಂಬೇಡ್ಕರ್ ಸರ್ಕಲ್ನಿಂದ ಸಿಗ್ನಲ್ ವರೆಗೆ ರೋಡ್ ಶೋ, ಸಂಜೆ 6 ಗಂಟೆಗೆ ಮಂಗಳೂರು ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಮಾರಂಭದಲ್ಲಿ ಭಾಗವಹಿಸುವರು. ರಾತ್ರಿ 7:30ಕ್ಕೆ ಗೋಕರ್ಣನಾಥೇಶ್ವರ ದೇವಸ್ಥಾನ, ರೊಝಾರಿಯೋ ಚರ್ಚ್ ಹಾಗೂ ಉಳ್ಳಾಲ ದರ್ಗಾಕ್ಕೆ ಭೇಟಿ ನೀಡಲಿದ್ದಾರೆ. ರಾತ್ರಿ ಮಂಗಳೂರು ಸರ್ಕ್ಯೂಟ್ ಹೌಸ್‌ನಲ್ಲಿ ವಾಸ್ತವ್ಯ ಹೂಡುವರು.

ಮಾ.21ರಂದು ಬೆಳಗ್ಗೆ 8:30ಕ್ಕೆ ದ.ಕ. ಮತ್ತು ಉಡುಪಿ ಜಿಲ್ಲೆಯ ಬ್ಲಾಕ್ ಅಧ್ಯಕ್ಷರ ಸಭೆ, 9:30ಕ್ಕೆ ಉಭಯ ಜಿಲ್ಲೆಗಳ ಹಿರಿಯ ಮುಖಂಡರ ಸಭೆಯಲ್ಲಿ ಪಾಲ್ಗೊಂಡು 10:20ಕ್ಕೆ ವಿಮಾನ ನಿಲ್ದಾಣದಿಂದ ಹೆಲಿಕಾಫ್ಟ್ಟರ್ ಮೂಲಕ ಶೃಂಗೇರಿಗೆ ತೆರಳುವರು ಎಂದು ಪ್ರಕಟನೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News