ಪುತ್ತೂರು; ಸಿಡಿಲು ಬಡಿದು ಓರ್ವ ಮೃತ್ಯು : ಇಬ್ಬರು ಗಂಭೀರ

Update: 2018-03-19 14:35 GMT
ಸಾಂದರ್ಭಿಕ ಚಿತ್ರ

ಪುತ್ತೂರು,ಮಾ.19; ಸಿಡಿಲು ಬಡಿದು ವ್ಯಕ್ತಿಯೊಬ್ಬರು ಮೃತಪಟ್ಟು ಇಬ್ಬರು ಗಂಭೀರ ಗಾಯಗೊಂಡ ಘಟನೆ ಪುತ್ತೂರು ತಾಲೂಕಿನ ಸವಣೂರು ಗ್ರಾಮದ ಪುಣ್ಚಪ್ಪಾಡಿ ಎಂಬಲ್ಲಿ ಸೋಮವಾರ ಸಂಜೆ ನಡೆದಿದೆ. 

ಬೆಳ್ಳಾರೆ ಠಾಣಾ ವ್ಯಾಪ್ತಿಯ ಪುಣ್ಚಪ್ಪಾಡಿಯಲ್ಲಿ ನಡೆದ ಈ ಅವಘಡದಲ್ಲಿ ಮೃತಪಟ್ಟ ವ್ಯಕ್ತಿಯನ್ನು ಧನಂಜಯ(35) ಎಂದು ಗುರುತಿಸಲಾಗಿದ್ದು, ಮೃತರ ಸಹೋದರಿ ಗೀತಾ ಮತ್ತು ದೊಡ್ಡಪ್ಪ ಕುಂಡ ಎಂಬವರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News