ದಲಿತರ ಮೇಲೆ ದೌರ್ಜನ್ಯ: ಖಂಡನೆ

Update: 2018-03-20 15:09 GMT

ಮೂಡಿಗೆರೆ, ಮಾ. 20: ತಾಲೂಕಿನ ಬಾಳೂರು ಹೋಬಳಿಯ ಮಾಳಿಗನಾಡು ಗ್ರಾಮದಲ್ಲಿ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದ್ದರೂ ತಪ್ಪಿತಸ್ಥರ ವಿರುದ್ಧ ಪೊಲೀಸರು ಯಾವುದೇ ಕ್ರಮ ಕೈಗೊಳ್ಳದಿರುವುದು ಖಂಡನೀಯ ಎಂದು ವಿವಿಧ ಸಂಘಟನೆ ಮುಖಂಡರಾದ  ಅಂಗಡಿ ಚಂದ್ರು, ಎಂ.ಜಿ.ಲೋಕೇಶ್ ಉಗ್ಗೇಹಳ್ಳಿ, ಸುರೇಂದ್ರ, ರತನ್ ಊರುಬಗೆ, ಸುಂದ್ರೇಶ ಮರಗುಂದ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಪೊಲೀಸರ ನಿಷ್ಕ್ರಿಯತೆಯಿಂದ ಗ್ರಾಮಸ್ಥರಿಗೆ ಆತಂಕ ಮೂಡಿದೆ. ಹಲವು ದಿನಗಳಿಂದ ನಿರಂತರವಾಗಿ ದಲಿತರ ಮೇಲೆ ದೌರ್ಜನ್ಯ ನಡೆಯುತ್ತಿದೆ. ಠಾಣೆಯಲ್ಲಿ ದೂರು ದಾಖಲಾದರೂ ಪೊಲೀಸರು ಕಾನೂನು ರೀತ್ಯ ಕ್ರಮ ಕೈಗೊಳ್ಳುತ್ತಿಲ್ಲ. ಸಾಲುಮರದ ಜನ ಭಯದಿಂದ ಬದುಕುವಂತಾಗಿದೆ. ವೃದ್ಧೆಯೋರ್ವರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ್ದಾರೆ. ತಪ್ಪಿತಸ್ಥರನ್ನು ಕೂಡಲೇ ಬಂಧಿಸಬೇಕು. ಇಂತಹ ಘಟನೆಗಳು ಮತ್ತೆ ಮರುಕಳಿಸಿದರೆ ತೀವ್ರ ಹೊರಾಟ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News