ಕಾರು-ಬೈಕ್ ನಡುವೆ ಭೀಕರ ರಸ್ತೆ ಅಪಘಾತ: ಮೂವರು ಬೈಕ್ ಸವಾರರು ಮೃತ್ಯು

Update: 2018-03-20 15:50 GMT

ಬೀದರ್, ಮಾ. 20: ಜಿಲ್ಲೆಯ ಬಸವಕಲ್ಯಾಣದಲ್ಲಿ ಕಾರು ಹಾಗೂ ದ್ವಿಚಕ್ರ ವಾಹನದ ಮಧ್ಯೆ ರಾಷ್ಟ್ರೀಯ ಹೆದ್ದಾರಿ-65ರ ಕೌಡಿಯಾಳ ಗ್ರಾಮದ ಹತ್ತಿರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಬೈಕ್ ಸವಾರರು ಮೃತಪಟ್ಟಿರುವ ಘಟನೆ ಮಂಗಳವಾರ ನಡೆದಿದೆ.

ಮೃತರನ್ನು ತಾಲೂಕಿನ ಯರಂಡಿ ಗ್ರಾಮದ ನಿವಾಸಿಗಳಾದ ಇಸ್ಮಾಯಿಲ್ ಜಾಧವ (48), ಸುಭಾಷ ಕಾಶಿನಾಥ (38) ಹಾಗೂ ಯಲ್ಲಪ್ಪಲಕ್ಷ್ಮಣ (34) ಎಂದು ಗುರುತಿಸಲಾಗಿದೆ.

ದ್ವಿಚಕ್ರ ವಾಹನದಲ್ಲಿ ಮೂರು ಮಂದಿ ಯುವಕರು ಯರಂಡಿ ಗ್ರಾಮದಿಂದ ಹುಮನಾಬಾದ್ ಕಡೆ ತೆರಳುತ್ತಿದ್ದ ವೇಳೆ ಹಿಂದಿನಿಂದ ಶರವೇಗದಲ್ಲಿ ಬಂದ ಕಾರು, ದ್ವಿಚಕ್ರ ವಾಹನಕ್ಕೆ ಢಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ. 

ಅಪಘಾತಕ್ಕೆ ಕಾರಣವಾದ ಕಾರು ಚಾಲಕ ಪರಾರಿಯಾಗಿದ್ದಾನೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗಾಗಿ ಬಸವಕಲ್ಯಾಣ ಸರಕಾರಿ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಬಸವಕಲ್ಯಾಣ ಠಾಣಾ ಪೊಲೀಸರು ಮೊಕದ್ದಮೆ ದಾಖಲಿಸಿಕೊಂಡಿದ್ದು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News