ಮಾ.23ಕ್ಕೆ ಭಗತ್‌ಸಿಂಗ್ ಪುತ್ಥಳಿ ಅನಾವರಣ

Update: 2018-03-20 18:09 GMT

ಬೆಂಗಳೂರು, ಮಾ.20: ಕ್ರಾಂತಿಕಾರಿ ಭಗತ್‌ಸಿಂಗ್ ಹುತಾತ್ಮ ದಿನದ ಅಂಗವಾಗಿ ಮಾ.23 ರಂದು ನಗರದ ಸ್ವಾತಂತ್ರ ಉದ್ಯಾನವನದಲ್ಲಿ ಭಗತ್ ಪುತ್ಥಳಿ ಅನಾವರಣ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದು ರಾಷ್ಟ್ರೀಯ ಚಾಲಕರ ಒಕ್ಕೂಟದ ಅಧ್ಯಕ್ಷ ಗಂಡಸಿ ಸದಾನಂದಸ್ವಾಮಿ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ರಿಟಿಷರ ವಿರುದ್ಧ ಅತ್ಯಂತ ಸಣ್ಣ ವಯಸ್ಸಿನಲ್ಲಿಯೇ ಪ್ರಾಣ ತ್ಯಾಗ ಮಾಡಿದ ಭಗತ್‌ಸಿಂಗ್ ಇಂದಿನ ಯುವ ಸಮುದಾಯಕ್ಕೆ ಮಾದರಿಯಾಗಿದ್ದಾರೆ. ಈ ನಿಟ್ಟಿನಲ್ಲಿ ಅವರ ವಿಚಾರಧಾರೆಗಳನ್ನು ವಿದ್ಯಾರ್ಥಿ, ಯುವಜನರಿಗೆ ತಲುಪಿಸಬೇಕು ಎಂಬ ಉದ್ದೇಶದಿಂದ ಅವರ ಪುತ್ಥಳಿ ಅನಾವರಣ ಮಾಡಲಾಗುತ್ತಿದೆ ಎಂದು ಹೇಳಿದರು.

ಸಾರಿಗೆ ಸಚಿವ ಎಚ್.ಎಂ.ರೇವಣ್ಣ ಭಗತ್‌ಸಿಂಗ್ ಪುತ್ಥಳಿ ಅನಾವರಣ ಮಾಡಲಿದ್ದು, ಸಂಸದ ಪಿ.ಸಿ.ಮೋಹನ್, ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ, ಮೇಯರ್ ಸಂಪತ್‌ರಾಜ್, ಶಾಸಕ ದಿನೇಶ್ ಗುಂಡೂರಾವ್, ಲತಾ ಕುವರ್ ರಾಥೋಡ್ ಹಾಗೂ ಇನ್ನಿತರರು ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News