ಅಚ್ಚರಿಯ ಹೇಳಿಕೆ ನೀಡಿದ ಮಾಗಡಿ ಶಾಸಕ ಬಾಲಕೃಷ್ಣ

Update: 2018-03-21 07:20 GMT

ಬೆಂಗಳೂರು, ಮಾ.21: ಜೆಡಿಎಸ್ ನ ರಾಷ್ಟ್ರೀಯ ಅಧ್ಯಕ್ಷ ಹೆಚ್ ಡಿ ದೇವೇಗೌಡ ಮತ್ತು ರಾಜ್ಯಾಧ್ಯಕ್ಷ ಹೆಚ್ .ಡಿ.ಕುಮಾರಸ್ವಾಮಿ ಕರೆದರೆ ಮಾತುಕತೆಗೆ ಸಿದ್ದ ಎಂದು ಮಾಗಡಿ ಶಾಸಕ ಎಚ್ ಸಿ ಬಾಲಕೃಷ್ಣ  ಇಂದು ಹೇಳಿದ್ದಾರೆ.

ಜೆಡಿಎಸ್ ನ 7 ಮಂದಿ ಬಂಡಾಯ ಶಾಸಕರ ಗುಂಪಿನಲ್ಲಿ ಗುರುತಿಸಿಕೊಂಡಿರುವ ಶಾಸಕ ಬಾಲಕೃಷ್ಣ ಅವರು ಇದೀಗ ಗೊಂದಲದಲ್ಲಿ ಸಿಲುಕಿದ್ದಾರೆ.

ಕಳೆದ ರಾಜ್ಯಸಭಾ ಚುನಾವಣೆ ವೇಳೆ ಪಕ್ಷದ ವಿಪ್ ನ್ನು ಉಲ್ಲಂಘಿಸಿ ಕಾಂಗ್ರೆಸ್ ಗೆ ಮತ ಚಲಾಯಿಸಿದ್ದ ಶಾಸಕ ಬಾಲಕೃಷ್ಣ ಸೇರಿದಂತೆ ಏಳು ಮಂದಿ ಬಂಡಾಯ ಶಾಸಕರಿಗೂ ಮುಂದಿನ ರಾಜ್ಯಸಭಾ ಚುನಾವಣೆಯಲ್ಲಿ ಜೆಡಿಎಸ್ ನ ಅಧಿಕೃತ ಅಭ್ಯರ್ಥಿ ಬಿ.ಎಂ.ಫಾರೂಖ್ ಅವರಿಗೆ ಮತ ನೀಡುವಂತೆ ಪಕ್ಷದ ರಾಜ್ಯಾಧ್ಯಕ್ಷ ಚ್.ಡಿ.ಕುಮಾರಸ್ವಾಮಿ ವಿಪ್ ಜಾರಿಗೊಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News