ಚಿಕ್ಕಮಗಳೂರು : ರಾಹುಲ್ ಆಗಮನಕ್ಕೆ ಸ್ವಾಗತ ಕೋರುವ ಫ್ಲೆಕ್ಸ್ ಹರಿದ ಕಿಡಿಗೇಡಿಗಳು

Update: 2018-03-21 07:45 GMT

ಚಿಕ್ಕಮಗಳೂರು, ಮಾ.21: ರಾಹುಲ್‍ಗಾಂಧಿ ಚಿಕ್ಕಮಗಳೂರು ನಗರಕ್ಕೆ ಆಗಮಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮುಖಂಡರು ನಗರದಾದ್ಯಂತ ಶುಭಾಶಯ ಕೋರಿ ಹಾಕಿದ್ದ ಕೆಲ ಫ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದಾರೆ.

ನಗರದ ಬೈಪಾಸ್ ರಸ್ತೆ ಸೇರಿದಂತೆ ನಗರದ ಐದು ಕಡೆಗಳಲ್ಲಿ ಹಾಕಿದ್ದ ಕಾಂಗ್ರೆಸ್ ಮುಖಂಡರ ಭಾವಚಿತ್ರಗಳಿದ್ದ ಪ್ಲೆಕ್ಸ್ ಗಳನ್ನು ಕಿಡಿಗೇಡಿಗಳು ಹರಿದು ಹಾಕಿದ್ದು, ನಗರಸಭೆಯಿಂದ ಅನುಮತಿ ಪಡೆದು ಹಾಕಲಾಗಿದ್ದ ಫ್ಲೆಕ್ಸ್ ಗಳನ್ನು ಬುಧವಾರ ಮುಂಜಾನೆಯೇ ಹರಿದು ಹಾಕಲಾಗಿದೆ.

ಬಿಜೆಪಿ ಕಾರ್ಯಕರ್ತರೇ ಈ ಕೃತ್ಯ ಎಸಗಿದ್ದಾರೆಂದು ಕಾಂಗ್ರೆಸ್ ಮುಖಂಡರು ಆರೋಪಿಸಿದ್ದಾರೆ. ಈ ಸಂಬಂಧ ಪೊಲೀಸರಿಗೆ ದೂರು ನೀಡಲಾಗುವುದೆಂದು ಕಾಂಗ್ರೆಸ್ ಮುಖಂಡರು ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News