ವಿದ್ವತ್ ಮೇಲೆ ಹಲ್ಲೆ ಪ್ರಕರಣ: ನಲಪಾಡ್ ಗೆ ಎ.4ರ ತನಕ ನ್ಯಾಯಾಂಗ ಬಂಧನ ವಿಸ್ತರಣೆ
Update: 2018-03-21 13:50 IST
ಬೆಂಗಳೂರು, ಮಾ.21: ವಿದ್ವತ್ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಶಾಸಕ ಹಾರೀಸ್ ಪುತ್ರ ಮುಹಮ್ಮದ್ ನಲಪಾಡ್ ಗೆ ನ್ಯಾಯಾಂಗ ಬಂಧನವನ್ನು ಎ.4ರ ತನಕ ವಿಸ್ತರಿಸಲಾಗಿದೆ.
ಬೆಂಗಳೂರಿನ 1ನೇ ಎಸಿಎಂಎಂ ನ್ಯಾಯಾಲಯವು ಮುಹಮ್ಮದ್ ನಲಪಾಡ್ ಗೆ ನ್ಯಾಯಾಂಗ ಬಂಧನವನ್ನು ವಿಸ್ತರಿಸಿತು. ಮುಹಮ್ಮದ್ ನಲಪಾಡ್ ಇಂದ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯಕ್ಕೆ ಹಾಜರಾಗಿದ್ದನು.