ಸರಕಾರದ ವತಿಯಿಂದಲೇ ಶಿವಶರಣ ಹಡಪದ ಅಪ್ಪಣ್ಣ ಜಯಂತಿ: ಸಚಿವೆ ಉಮಾಶ್ರೀ

Update: 2018-03-21 17:25 GMT

ಬೆಂಗಳೂರು, ಮಾ.21: ಶಿವಶರಣ ಹಡಪದ ಅಪ್ಪಣ್ಣರವರ ಜಯಂತಿಯನ್ನು ಪ್ರತಿ ವರ್ಷ ಜು.27ರಂದು ರಾಜ್ಯ ಸರಕಾರದ ವತಿಯಿಂದಲೆ ಆಚರಿಸಲಾಗುವುದು ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ವೈಚಾರಿಕ ಕ್ರಾಂತಿ ಮತ್ತು ಸಾಮಾಜಿಕ ಕ್ರಾಂತಿಗಾಗಿ ಹೆಸರಾದ ಹಡಪದ ಅಪ್ಪಣ್ಣ ಜಯಂತಿಯನ್ನು ಆಚರಿಸಲು ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು, ಎಲ್ಲ ಜಿಲ್ಲಾ ಮತ್ತು ತಾಲೂಕು ಕೇಂದ್ರಗಳಲ್ಲಿ ಜಯಂತಿ ಆಚರಣೆಗಾಗಿ 69ಲಕ್ಷ ರೂ.ಬಿಡುಗಡೆ ಮಾಡಲಾಗಿದೆ ಎಂದು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News