ಯಡಿಯೂರಪ್ಪ ಮೌನ ಮುರಿಯಲಿ: ದಿನೇಶ್ ಗುಂಡೂರಾವ್

Update: 2018-03-23 12:29 GMT

ಬೆಂಗಳೂರು, ಮಾ. 23: ಲಿಂಗಾಯತ ಪ್ರತ್ಯೇಕ ಧರ್ಮಕ್ಕೆ ಶಿಫಾರಸು ಮಾಡಿರುವ ರಾಜ್ಯ ಸರಕಾರದ ಕ್ರಮದ ಬಗ್ಗೆ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಹಾಗೂ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್ ತಮ್ಮ ಅಭಿಪ್ರಾಯ ವ್ಯಕ್ತಪಡಿಸಬೇಕು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್ ಗುಂಡೂರಾವ್ ಒತ್ತಾಯಿಸಿದ್ದಾರೆ.

ಶುಕ್ರವಾರ ವಿಧಾನಸಭೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ವೀರಶೈವ ಲಿಂಗಾಯತರ ಬೇಡಿಕೆ ಆಧರಿಸಿ ಪ್ರತ್ಯೇಕ ಧರ್ಮದ ಶಿಫಾರಸು ನಿರ್ಧಾರವನ್ನು ರಾಜ್ಯ ಸರಕಾರ ಕೈಗೊಂಡಿದೆ. ಈ ಬಗ್ಗೆ ಯಡಿಯೂರಪ್ಪ, ಶೆಟ್ಟರ್ ಮೌನಕ್ಕೆ ಶರಣಾಗಿದ್ದಾರೆ. ಈ ವಿಚಾರದಲ್ಲಿ ರಾಜಕೀಯ ಸರಿಯಲ್ಲ ಎಂದು ಆಕ್ಷೇಪಿಸಿದರು.

ಲಿಂಗಾಯತ ಸಮುದಾಯದ ಬೇಡಿಕೆ ಆಧರಿಸಿ ಸಮಿತಿ ರಚಿಸಿ ರಾಜ್ಯ ಸರಕಾರ ಸಮಿತಿ ವರದಿಯನ್ವಯ ಪ್ರತ್ಯೇಕ ಧರ್ಮದ ಶಿಫಾರಸು ಮಾಡಿದೆ. ಆ ಸಮುದಾಯದ ಮುಖಂಡರಾದ ಯಡಿಯೂರಪ್ಪ ಮತ್ತು ಶೆಟ್ಟರ್ ತಮ್ಮ ಅಭಿಪ್ರಾಯ ಸ್ಪಷ್ಟಪಡಿಸಬೇಕು ಎಂದು ಕೋರಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News