ದಾವಣಗೆರೆ: ಕೃಷಿ ಹೊಂಡಕ್ಕೆ ಬಿದ್ದು ಯುವಕ ಮೃತ್ಯು

Update: 2018-03-23 13:16 GMT

ದಾವಣಗೆರೆ,ಮಾ.23: ನೀರು ಕುಡಿಯಲು ಬಂದ ಯುವಕನೊಬ್ಬ ಕಾಳು ಜಾರಿ ಕೃಷಿ ಹೊಂಡಕ್ಕೆ ಬಿದ್ದು ಮೃತಪಟ್ಟ ಘಟನೆ ಹೊನ್ನಾಳಿ ತಾಲೂಕಿನ ಅರಕೆರೆ ಗ್ರಾಮದಲ್ಲಿ ಶುಕ್ರವಾರ ಮಧ್ಯಾಹ್ನ ನಡೆದಿದೆ.

ಅರಕೆರೆ ಗ್ರಾಮದ ಪವನ್ (20) ವರ್ಷ ಮೃತಪಟ್ಟ ಯುವಕ. ಗ್ರಾಮದ ಹೊರವಲಯದಲ್ಲಿ ಕುರಿ ಮೇಯಿಸಲು ತೆರಳಿದ್ದ ಪವನ್, ಬಾಯಾರಿಕೆಯಿಂದ ಅಲ್ಲಿಯೇ ಮಹೇಶ್ವರಪ್ಪ ಎಂಬುವವರ ಜಮೀನಿನಲ್ಲಿದ್ದ ಕೃಷಿ ಹೊಂಡದಲ್ಲಿ ನೀರು ಕುಡಿಯಲು ಇಳಿಯುವಾಗ ಕಾಲು ಜಾರಿದ ಪರಿಣಾಮ ನೀರಲ್ಲಿ ಮುಳುಗಿ ಮೃತಪಟ್ಟಿದ್ದಾನೆ.

ನಂತರ ಮೃತ ಯುವಕನ ಶವವನ್ನು ಅಗ್ನಿಶಾಮಕ ದಳದ ಸಿಬ್ಬಂದಿ ಹಾಗೂ ಅಧಿಕಾರಿಗಳು ಹೊರ ತೆಗೆದರು. ಈ ಕುರಿತು ಹೊನ್ನಾಳಿ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News