ಕೊಲ್ಲರಕೋಡಿ : ಕಾಂಕ್ರಿಟ್ ರಸ್ತೆ ಉದ್ಘಾಟನೆ

Update: 2018-03-23 18:29 GMT

ನರಿಂಗಾನ, ಮಾ.23: ನರಿಂಗಾನ ಗ್ರಾ.ಪಂ ವ್ಯಾಪ್ತಿಯ ಕೊಲ್ಲರಕೋಡಿಯ ಕೋಡಿಯಿಂದ ಮೇಗಿನಮನೆಯವರೆಗೆ 5 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ ನೂತನ ಕಾಂಕ್ರಿಟ್ ರಸ್ತೆಯನ್ನು ರಾಜ್ಯ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಯು.ಟಿ. ಖಾದರ್ ಉದ್ಘಾಟಿಸಿದರು.

ಈ ಸಂದರ್ಭ ಜಿಲ್ಲಾ ಪಂಚಾಯತ್ ಸದಸ್ಯೆ ಮಮತಾ ಡಿ.ಎಸ್.ಗಟ್ಟಿ, ಬಂಟ್ವಾಳ ತಾಲೂಕು ಪಂಚಾಯತ್ ಅಧ್ಯಕ್ಷ ಚಂದ್ರಹಾಸ ಕರ್ಕೇರ, ನರಿಂಗಾನ ಗ್ರಾಮ ಪಂಚಾಯತ್ ಅಧ್ಯಕ್ಷ ಇಸ್ಮಾಯಿಲ್ ಮೀನಂಕೋಡಿ, ಉಮರ್ ಪಜೀರ್, ಸಿದ್ದಿಕ್ ಪಾರೆ, ಎನ್.ಎಸ್ ಕರೀಂ, ಇಬ್ರಾಹಿಂ ಅಹ್ಸನಿ, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ್ ಕಾಜವ, ಫಯಾಝ್ ಮೊಂಟೆಪದವು, ಸಲಾಂ ಎಮ್.ಎಚ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News