ಬೆಳ್ತಂಗಡಿ: ಟ್ಯಾಂಕರ್ - ಬೈಕ್ ಢಿಕ್ಕಿ; ಇಬ್ಬರು ಮೃತ್ಯು

Update: 2018-03-24 03:53 GMT

ಬೆಳ್ತಂಗಡಿ, ಮಾ. 24: ಉಜಿರೆ ಸಮೀಪದ ಗುರಿಪಳ್ಳ ರಸ್ತೆಯ ಅಲಕೆ ಎಂಬಲ್ಲಿ ಬೈಕಿಗೆ ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಯುವಕರು ಮೃತಪಟ್ಟ ಘಟನೆ ಶುಕ್ರವಾರ ರಾತ್ರಿ ನಡೆದಿದೆ.

ಗುರಿಪಳ್ಳ ನಿವಾಸಿ ಹರೀಶ್ ಹಾಗೂ ಗುರಿಪಳ್ಳ ಕನ್ಯಾಡಿ ನಿವಾಸಿ ಸುಧೀರ್ ಮೃತರು ಎಂದು ಗುರುತಿಸಲಾಗಿದೆ.

ಇವರಿಬ್ಬರು ಸಹೋದರರಾಗಿದ್ದು, ಮನೆಗೆ ತೆರಳುತ್ತಿದ್ದಾಗ ಎದುರಿನಿಂದ ಬರುತ್ತಿದ್ದ ಟ್ಯಾಂಕರ್ ಅವರ ಬೈಕಿಗೆ ಢಿಕ್ಕಿ ಹೊಡೆದಿದ್ದು, ಗಂಭೀರ ಗಾಯಗೊಂಡಿದ್ದ  ಇಬ್ಬರು ಸ್ಥಳದಲ್ಲೇ ಮೃತಪಟ್ಟರು ಎಂದು ತಿಳಿದುಬಂದಿದೆ.

ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ‌ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News