ದಾವಣಗೆರೆ: ರಸ್ತೆ ಅಪಘಾತಕ್ಕೆ ವೈದ್ಯ ವಿದ್ಯಾರ್ಥಿ ಬಲಿ

Update: 2018-03-24 05:58 GMT

ದಾವಣಗೆರೆ, ಮಾ. 24: ಲಾರಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಮೃತಪಟ್ಟು, ಇನ್ನೋರ್ವ ಗಂಭೀರ ಗಾಯಗೊಂಡ ಘಟನೆ ಜಗಳೂರು ತಾಲ್ಲೂಕಿನ ದೊಣ್ಣೆ ಹಳ್ಳಿ ಗ್ರಾಮದ ರಾಷ್ಟ್ರೀಯ ಹೆದ್ದಾರಿಯಲ್ಲಿ ಶನಿವಾರ ಬೆಳಗ್ಗೆ 10 ಗಂಟೆಯ ಸುಮಾರಿಗೆ ನಡೆದಿದೆ.

ಜಗಳೂರಿನ ಎಂಬಿಬಿಎಸ್ ವಿದ್ಯಾರ್ಥಿ ಕಿರಣ್ (20) ಮೃತರು ಎಂದು ಗುರುತಿಸಲಾಗಿದೆ. ಕಿರಣ್ ಅವರ ತಂದೆ ತಿಪ್ಪೇಸ್ವಾಮಿ ಗಂಭೀರ ಗಾಯಗೊಂಡಿದ್ದು, ಅವರನ್ನು ಇಲ್ಲಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಮುಸ್ಟೂರು ಗ್ರಾಮದಿಂದ ಜಗಳೂರುಗೆ ಬೈಕ್ ನಲ್ಲಿ ತೆರಲುತ್ತಿದ್ದಾಗ ಈ ಅಪಘಾತ ಸಂಭವಿಸಿರುವುದಾಗಿ ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಜಗಳೂರು ಠಾಣೆ ಪೊಲೀಸರು ಭೇಟಿ ನೀಡಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News