ಅಗತ್ಯ ಯೋಜನೆಗಳಿಗೆ ಆಧಾರ್ ಜೋಡಣೆ ಗಡುವು ವಿಸ್ತರಣೆ

Update: 2018-03-28 16:09 GMT

ಹೊಸದಿಲ್ಲಿ, ಮಾ.28: ಅಗತ್ಯ ಯೋಜನೆಗಳಿಗೆ ಆಧಾರ್ ಜೋಡಣೆಯ ಗಡುವನ್ನು ಕೇಂದ್ರ ಸರಕಾರವು ಜೂನ್ 30ರವರೆಗೆ ವಿಸ್ತರಿಸಿದೆ. ಈ ಹಿಂದೆ ಆಧಾರ್ ಜೋಡಣೆಗೆ ಮಾರ್ಚ್ 30 ಅಂತಿಮ ಗಡುವು ಎಂದು ಸರಕಾರ ತಿಳಿಸಿತ್ತು. ಇದೀಗ ಈ ಅವಧಿಯನ್ನು ಮೂರು ತಿಂಗಳ ಕಾಲ ಮುಂದೆ ಹಾಕಲಾಗಿದೆ ಎಂದು ಸರಕಾರಿ ಪ್ರಕಟನೆಯಲ್ಲಿ ತಿಳಿಸಲಾಗಿದೆ. ಆಧಾರ್‌ನ ಮಾನ್ಯತೆಯನ್ನು ಪ್ರಶ್ನಿಸಿ ಹಾಕಲಾಗಿರುವ ಮೇಲ್ಮನವಿಯ ತೀರ್ಪನ್ನು ಪಂಚ ಸದಸ್ಯ ಸಂವಿಧಾನ ಪೀಠವು ನೀಡುವವರೆಗೆ ಮತ್ತು ಸರಿಯಾದ ಕಾನೂನು ಜಾರಿ ಮಾಡುವವರೆಗೆ ಬ್ಯಾಂಕ್ ಖಾತೆ ಮತ್ತು ಮೊಬೈಲ್ ಫೋನ್ ಸಂಖ್ಯೆಗಳಿಗೆ ಆಧಾರ್ ಜೋಡಿಸುವ ಅಂತಿಮ ದಿನಾಂಕವನ್ನು ಅನಿರ್ದಿಷ್ಟಾವಧಿ ವರೆಗೆ ವಿಸ್ತರಿಸಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News