ಎ.7 ರಂದು ಚಿತ್ರದುರ್ಗಕ್ಕೆ ರಾಹುಲ್‌ ಗಾಂಧಿ ಭೇಟಿ: ಎಚ್.ಆಂಜನೇಯ

Update: 2018-03-29 13:42 GMT

ಬೆಂಗಳೂರು, ಮಾ.29: ಎಐಸಿಸಿ ಅಧ್ಯಕ್ಷ ರಾಹುಲ್‌ಗಾಂಧಿ ಎಪ್ರಿಲ್ 7ರಂದು ಚಿತ್ರದುರ್ಗ ಜಿಲ್ಲೆಗೆ ಭೇಟಿ ನೀಡಲಿದ್ದು, ಅಂದು ಹೊಳಲ್ಕೆರೆಯಲ್ಲಿ ಜರುಗಲಿರುವ ಸಾರ್ವಜನಿಕ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದು ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ತಿಳಿಸಿದ್ದಾರೆ.

ಗುರುವಾರ ನಗರದ ಕ್ವೀನ್ಸ್‌ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಿನ್ನೆ ನಡೆದ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರ ಸಭೆಯಲ್ಲಿ ನನ್ನ ವಿರುದ್ಧ ಯಾರೊಬ್ಬರೂ ಅಸಮಾಧಾನ ವ್ಯಕ್ತಪಡಿಸಿಲ್ಲ ಎಂದರು.

ಮುಖ್ಯಮಂತ್ರಿ ಹಾಗೂ ಕೆಪಿಸಿಸಿ ಅಧ್ಯಕ್ಷರು ನನ್ನ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎಂಬುದೆಲ್ಲ ಸುಳ್ಳು. ಚಿತ್ರದುರ್ಗ ಜಿಲ್ಲೆಯ ಎಲ್ಲ ಮುಖಂಡರು ಒಗ್ಗಟಾಗಿದ್ದೇವೆ. ಯಾವ ಸಚಿವರ ವಿರುದ್ಧವು ಮುಖಂಡರು ಆಕ್ರೋಶ ವ್ಯಕ್ತಪಡಿಸಿಲ್ಲ ಎಂದು ಆಂಜನೇಯ ಸ್ಪಷ್ಟಣೆ ನೀಡಿದರು.

ಚಿತ್ರದುರ್ಗ ಜಿಲ್ಲೆಯ ವಿವಿಧ ಕ್ಷೇತ್ರಗಳಿಂದ ಕಣಕ್ಕಿಳಿಯಲು ನಟರಾದ ಶಶಿಕುಮಾರ್ ಹಾಗೂ ಭಾವನಾ ಟಿಕೆಟ್ ಕೇಳುತ್ತಿದ್ದಾರೆ. ನಾವು ಟಿಕೆಟ್ ಕೊಡಲು ಸಾಧ್ಯವಿಲ್ಲ. ಅದೇನಿದ್ದರೂ ಹೈಕಮಾಂಡ್ ನಿರ್ಧಾರಕ್ಕೆ ಬಿಟ್ಟದ್ದು ಎಂದು ಆಂಜನೇಯ ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News