ಉಡುಪಿ: ಅಂಬೇಡ್ಕರ್ ಜಯಂತಿಗೆ ನೀತಿ ಸಂಹಿತೆ ಕೈಬಿಡಲು ಆಗ್ರಹ

Update: 2018-04-02 15:15 GMT

ಉಡುಪಿ, ಎ.2: ಸಂವಿಧಾನ ಶಿಲ್ಪಿಡಾ.ಬಾಬಾ ಸಾಹೇಬ ಅಂಬೇಡ್ಕರ್ ರವರ ಜನ್ಮದಿನಾಚರಣೆ ಆಚರಿಸುವವರಿಗೆ ಚುನಾವಣಾ ಆಯೋಗದ ನೀತಿ ಸಂಹಿತೆ ಯನ್ನು ಕೈಬಿಡುವಂತೆ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಆಗ್ರಹಿಸಿದೆ.

ಈ ಕುರಿತು ಜಿಲ್ಲಾಧಿಕಾರಿ ಮತ್ತು ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಅವರಿಗೆ ಮನವಿ ಸಲ್ಲಿಸಿದ ದಸಂಸ ನಿಯೋಗ, ಜಿಲ್ಲೆಯಾದ್ಯಂತ ವಿವಿಧ ಬಗೆಗಳಲ್ಲಿ ಅಂಬೇಡ್ಕರ್ ಜಾಗೃತಿ ನಡೆಯುತ್ತದೆ. ಈ ಸಂದರ್ಭದಲ್ಲಿ ಚುನಾವಣೆಯ ನೀತಿ ಸಂಹಿತೆ ದಲಿತರಿಗೆ ಸಮಸ್ಯೆಯಾಗಬಾರದು. ನೀತಿ ಸಂಹಿತೆ ಅಂಬೇಡ್ಕರ್‌ರ ಜನ್ಮದಿನಾಚರಣೆ ಆಚರಿಸುವಲ್ಲಿ ಅಡ್ಡಿಯಾಗಬಾರದು ಎಂದು ತಿಳಿಸಿದೆ.

ಈ ಸಂದರ್ಭದಲ್ಲಿ ದಸಂಸ ಜಿಲ್ಲಾ ನಾಯಕ ಜಯನ್ ಮಲ್ಪೆ, ಹಿರಿಯ ದಲಿತ ಮುಖಂಡ ಸುಂದರ್ ಕಪ್ಪೆಟ್ಟು, ಅಂಬೇಡ್ಕರ್ ಯುವಸೇನೆಯ ಅಧ್ಯಕ್ಷ ಹರೀಶ್ ಸಾಲ್ಯಾನ್ ಮಲ್ಪೆ, ಪ್ರಸಾದ್ ನೆರ್ಗಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News