×
Ad

ಕುಂದಾಪುರ : ತೆಂಗಿನ ಮರದಿಂದ ಬಿದ್ದು ವ್ಯಕ್ತಿ ಮೃತ್ಯು

Update: 2018-04-03 21:05 IST

ಕುಂದಾಪುರ, ಎ.3: ತೆಂಗಿನ ಮರದಿಂದ ಆಕಸ್ಮಿಕವಾಗಿ ಕೆಳಗೆ ಬಿದ್ದು ವ್ಯಕ್ತಿಯೊಬ್ಬರು ಮೃತಪಟ್ಟ ಘಟನೆ ಎ.1ರಂದು ಮೂಡ್ಲಕಟ್ಟೆಯ ಹೇರಿಬೈಲು ಎಂಬಲ್ಲಿ ನಡೆದಿದೆ.

ಮೃತರನ್ನು ಹೇರಿಬೈಲು ಬಾಬು ಶೇರಿಗಾರ್ ಎಂಬವರ ಮಗ ಸುರೇಂದ್ರ ಶೇರಿಗಾರ್(47) ಎಂದು ಗುರುತಿಸಲಾಗಿದೆ. ಇವರು ಬೆಳಗ್ಗೆ 10.30ರ ಸುಮಾರಿಗೆ ಮನೆ ತೋಟದ ತೆಂಗಿನ ಮರಕ್ಕೆ ಕಾಯಿ ಕೊಯ್ಯಲು ಹತ್ತಿದ್ದು, ಈ ವೇಳೆ ಆಕಸ್ಮಿಕವಾಗಿ ಕೆಳಗೆ ಬಿದ್ದರೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಅವರು ರಾತ್ರಿ ವೇಳೆ ಚಿಕಿತ್ಸೆ ಫಲಕಾರಿಯಾಗದೆ ಅಜ್ಜರಕಾಡು ಜಿಲ್ಲಾ ಸರಕಾರಿ ಆಸ್ಪತ್ರೆಯಲ್ಲಿ ಮೃತಪಟ್ಟರು. ಈ ಬಗ್ಗೆ ಕುಂದಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News