ಎ.7: ಜುಬೈಲ್‌ನಲ್ಲಿ ಕಾಂಗ್ರೆಸ್ ಪಕ್ಷದ ಅನಿವಾಸಿ ಘಟಕದಿಂದ ಸಮಾವೇಶ

Update: 2018-04-04 06:16 GMT

ಜುಬೈಲ್, ಎ.4: ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ ಪಕ್ಷದ ಅನಿವಾಸಿ ಕಾಂಗ್ರೆಸ್‌ನ ಜುಬೈಲ್ ಘಟಕದ ವತಿಯಿಂದ ಎ.7ರಂದು ಜುಬೈಲ್‌ನಲ್ಲಿ ಕಾಂಗ್ರೆಸ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

ಜುಬೈಲಿನ ಕೆಮ್ಯಾ ಬೀಚ್ ಕ್ಯಾಂಪ್‌ನಲ್ಲಿ ಎ.7ರಂದು ಸಂಜೆ 5 ಗಂಟೆಗೆ ಕರ್ನಾಟಕ ಅರಣ್ಯ ಸಚಿವ ಬಿ.ರಮಾನಾಥ ರೈ ಅಧ್ಯಕ್ಷತೆಯಲ್ಲಿ ಜರುಗುವ ಸಮಾವೇಶವನ್ನು ಶಾಸಕ ಬಿ.ಎ.ಮೊಯ್ದಿನ್ ಬಾವ ಉದ್ಘಾಟಿಸಲಿರುವರು.

ಮುಖ್ಯ ಅತಿಥಿಗಳಾಗಿ ಮಾಜಿ ಸಚಿವ ವಿನಯ ಕುಮಾರ್ ಸೊರಕೆ, ಕರ್ನಾಟಕ ಅನಿವಾಸಿ ಫೋರಂ ಉಪಾಧ್ಯಕ್ಷೆ ಡಾ.ಆರತಿ ಕೃಷ್ಣನ್, ಕಾಂಗ್ರೆಸ್ ಪಕ್ಷದ ಮಂಗಳೂರು ಉತ್ತರ ಚುನಾವಣಾ ಉಸ್ತುವಾರಿ ದೇವಿಪ್ರಸಾದ್ ಶೆಟ್ಟಿ, ಕೃಷ್ಣಾಪುರದ ಮಿಸ್ಬಾಹ್ ವಿಮೆನ್ಸ್ ಕಾಲೇಜಿನ ಅಧ್ಯಕ್ಷ ಬಿ.ಎಂ.ಮುಮ್ತಾಝ್ ಅಲಿ, ಕರ್ನಾಟಕ ರಾಜ್ಯ ಯುವ ಕಾಂಗ್ರೆಸ್ ಕಾರ್ಯದರ್ಶಿ ಸುಹೈಲ್ ಕಂದಕ್, ಸುರತ್ಕಲ್ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಹಾರಿಸ್ ಬೈಕಂಪಾಡಿ, ಮಂಗಳೂರು ಉತ್ತರ ಕಾಂಗ್ರೆಸ್ ಸಮಿತಿಯ ಮುಖ್ಯ ಸಲಹೆಗಾರ ಬಿ.ಎ.ಅಬ್ದುಲ್ ನಾಸಿರ್ ಲಕ್ಕಿಸ್ಟಾರ್ ಮೊದಲಾದವರು ಭಾಗವಹಿಸಲಿದ್ದಾರೆ.

 ಸಮಾವೇಶದ ಅಂಗವಾಗಿ ಜುಬೈಲ್‌ನಲ್ಲಿ ಇತ್ತೀಚೆಗೆ ಸಭೆ ನಡೆಯಿತು. ಸಮಾವೇಶವನ್ನು ಯಶಸ್ವಿಗೊಳಿಸುವಂತೆ ಕರ್ನಿರೆ ಎಕ್ಸ್‌ಪರ್ಟೈಸ್ ಕಂಪೆನಿಯ ಅಧ್ಯಕ್ಷ ಅಶ್ರಫ್ ಕರ್ನಿರೆ ಹಾಗೂ ಮಾಧ್ಯಮ ಸಲಹೆಗಾರ ಫಾರೂಕ್ ಪೋರ್ಟ್‌ಫೋಲಿಯೋ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News