ಬೈಕ್ ಅಪಘಾತ: ಇಬ್ಬರು ಸವಾರರು ಮೃತ್ಯು

Update: 2018-04-05 15:40 GMT

ಬೆಂಗಳೂರು, ಏ.5: ಶರವೇಗದಲ್ಲಿ ಹೋಗುತ್ತಿದ್ದ ಬೈಕ್ ಆಯತಪ್ಪಿ ಬಿದ್ದು ಇಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ಗೌರಿಬಿದನೂರಿನ ಪೊತೇನಹಳ್ಳಿ ಬಳಿ ನಡೆದಿದೆ ಎನ್ನಲಾಗಿದೆ.

ನಗರಗೆರೆಯ ಮೇಳ್ಯಾದ ನಿವಾಸಿಗಳಾದ ಆನಂದ(30), ವೆಂಕಟೇಶ್(31) ಮೃತ ಯುವಕರೆಂದು ಪೊಲೀಸರು ಗುರುತಿಸಿದ್ದಾರೆ. ಇಬ್ಬರು ದೊಡ್ಡಬಳ್ಳಾಪುರದ ಗಾರ್ಮೆಂಟ್ಸ್ ಕಾರ್ಖಾನೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದರು. ಕೆಲಸದ ನಿಮಿತ್ತ ಬುಧವಾರ ವೆಳಪಿ ಗ್ರಾಮಕ್ಕೆ ಬಂದು ಕೆಲಸ ಮುಗಿಸಿಕೊಂಡು ದೊಡ್ಡಬಳ್ಳಾಪುರಕ್ಕೆ ತೆರಳುತ್ತಿದ್ದಾಗ ತೊಂಡೇಬಾವಿ ಹೋಬಳಿಯ ಪೊತೇನಹಳ್ಳಿ ಬಳಿ ಘಟನೆ ಸಂಭವಿಸಿದೆ ಎಂದು ತಿಳಿದು ಬಂದಿದೆ.

ಮೃತದೇಹಗಳನ್ನು ಗೌರಿಬಿದನೂರಿನ ಸಾರ್ವಜನಿಕ ಆಸ್ಪತ್ರೆಗೆ ರವಾನಿಸಲಾಗಿದ್ದು, ಈ ಸಂಬಂದ ಮಂಚೇನಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದಮೆ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News