ಇಬ್ಬರು ಶಿವಸೇನೆ ನಾಯಕರನ್ನು ಗುಂಡಿಕ್ಕಿ ಹತ್ಯೆಗೈದ ದುಷ್ಕರ್ಮಿಗಳು

Update: 2018-04-08 07:07 GMT

ಪುಣೆ, ಎ.8: ಇಬ್ಬರು ಶಿವಸೇನೆ ನಾಯಕರನ್ನು ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆಗೈದಿರುವ ಘಟನೆ ಅಹ್ಮದ್ ನಗರದಲ್ಲಿ ನಡೆದಿದೆ. ಮೃತಪಟ್ಟವರನ್ನು ಸಂಜಯ್ ಕೋಟ್ಕರ್ ಹಾಗು ವಸಂತ್ ತುಬೆ ಎಂದು ಗುರುತಿಸಲಾಗಿದೆ.

ಇಬ್ಬರು ದ್ವಿಚಕ್ರ ವಾಹನದಲ್ಲಿ ಸಾಗುತ್ತಿದ್ದಾಗ ಅವರ ಮೇಲೆ ದಾಳಿ ನಡೆಸಿದ ದುಷ್ಕರ್ಮಿಗಳು ಮಾರಕಾಯುಧಗಳಿಂದ ಹಲ್ಲೆ ನಡೆಸಿ ನಂತರ ಗುಂಡಿಕ್ಕಿದ್ದಾರೆ ಎನ್ನಲಾಗಿದೆ. ಕೊಟ್ವಾಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.

ಪೊಲೀಸರು ಸ್ಥಳಕ್ಕೆ ಧಾವಿಸುವಷ್ಟರಲ್ಲಿ ಜನರು ಆಕ್ರೋಶಿತಗೊಂಡಿದ್ದು, ಗುಂಪುಗೂಡಿದ್ದರು. ಇದರಿಂದಾಗಿ ಹತ್ಯೆಯಾಗಿ ಹಲವು ಗಂಟೆಗಳ ಕಾಲ ಮೃತದೇಹ ರಸ್ತೆಯಲ್ಲೇ ಬಿದ್ದಿತ್ತು.

ಈ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ಶಿವಸೇನೆ ಕಾರ್ಯಕರ್ತರು ಪುಣೆ-ಅಹ್ಮದ್ ನಗರ ಬೈಪಾಸ್ ರಸ್ತೆಗೆ ತಡೆಯೊಡ್ಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News