ಕೆರೂರು ವೈಶ್ಯ ಬ್ಯಾಂಕ್ ಸಹಾಯಕ ಮ್ಯಾನೇಜರ್ ಆತ್ಮಹತ್ಯೆ

Update: 2018-04-08 14:25 GMT

ಮೈಸೂರು,ಎ.8: ನಗರದ ಕೆರೂರು ವೈಶ್ಯ ಬ್ಯಾಂಕ್‍ನಲ್ಲಿ ಸಹಾಯಕ ಮ್ಯಾನೇಜರ್ ಆಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ.

ಮೃತನನ್ನು ಬೆಳಗಾವಿಯ ಶರತ್‍ಕುಮಾರ್(25) ಎಂದು ಗುರುತಿಸಲಾಗಿದೆ. ಮೈಸೂರು ಬ್ರಾಂಚ್‍ಗೆ ಕಳೆದ 6 ತಿಂಗನಿಂದಷ್ಟೇ ವರ್ಗಾವಣೆಗೊಂಡಿದ್ದರು. ಗನ್‍ಹೌಸ್ ಬಳಿ ಸ್ನೇಹಿತರೊಂದಿಗೆ ಬಾಡಿಗೆ ರೂಂ ನಲ್ಲಿ ವಾಸಿಸುತ್ತಿದ್ದರು. "ನನ್ನ ಸಾವಿಗೆ ನಾನೇ ಕಾರಣ ಕ್ಷಮಿಸಿ ಬಿಡಿ ಅಣ್ಣ" ಎಂದು ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ. ಈ ಸಂಬಂಧ ಕೆ.ಆರ್.ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News