ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ವಿವಾದ: ಕೇರಳದಾದ್ಯಂತ ದಲಿತ ಸಂಘಟನೆಗಳ ಪ್ರತಿಭಟನೆ
Update: 2018-04-09 09:25 GMT
ತಿರುವನಂತಪುರಂ, ಎ.9: ಎಸ್ಸಿ/ಎಸ್ಟಿ ದೌರ್ಜನ್ಯ ತಡೆ ಕಾಯ್ದೆ ತಿದ್ದುಪಡಿ ವಿರೋಧಿಸಿ ಕೇರಳದಾದ್ಯಂತ ದಲಿತ ಸಂಘಟನೆಗಳು ಪ್ರತಿಭಟನೆ ನಡೆಸಿದ್ದು, ಹಲವೆಡೆ ಬಂದ್ ಆಚರಿಸಲಾಗಿದೆ.
ತಂಪನೂರ್ ರೈಲ್ವೆ ನಿಲ್ದಾಣದ ಬಳಿ ಪ್ರತಿಭಟನೆ ನಡೆಸಿದ ದಲಿತ ಸಂಘಟನೆಗಳ ಕಾರ್ಯಕರ್ತರು ಈ ದಾರಿಯಲ್ಲಿ ಬರುವ ವಾಹನಗಳನ್ನು ತಡೆದರು. ಸುಪ್ರೀಂ ಕೋರ್ಟ್ ಈ ಹಿಂದಿನ ಆದೇಶವನ್ನು ರದ್ದುಪಡಿಸಬೇಕು ಎಂದು ಪ್ರತಿಭಟನಕಾರರು ಒತ್ತಾಯಿಸಿದರು.
ಸುಪ್ರೀಂ ಕೋರ್ಟ್ ಆದೇಶವನ್ನು ವಿರೋಧಿಸಿ ಇತ್ತೀಚೆಗೆ ದಲಿತರು ಭಾರತ್ ಬಂದ್ ನಡೆಸಿದ್ದರು. ಪಂಜಾಬ್, ಒಡಿಶಾ, ಉತ್ತರ ಪ್ರದೇಶ ಹಾಗು ರಾಜಸ್ಥಾನದಲ್ಲಿ ನಡೆದ ಬಂದ್ ಹಿಂಸಾರೂಪಕ್ಕೆ ತಿರುಗಿತ್ತು. ಹಿಂಸಾಚಾರದಲ್ಲಿ ಸುಮಾರು 11 ಮಂದಿ ಮೃತಪಟ್ಟಿದ್ದರು.