ಗುಂಡ್ಲುಪೇಟೆ: ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಲಾರಿ
Update: 2018-04-09 12:25 GMT
ಗುಂಡ್ಲುಪೇಟೆ,ಎ.09: ತಾಲೂಕಿನ ಬೇಗೂರು ಸಮೀಪದ ಅರೇಪುರ ಸಸ್ಯ ಕ್ಷೇತ್ರ ಬಳಿ ಕೇರಳ ನೋಂದಣಿಯ (ಕೆಎಲ್-58 ಆರ್ -9528) ಮೈಸೂರು ಕಡೆಯಿಂದ ಕೇರಳಕ್ಕೆ ಬೆಳ್ಳುಳ್ಳಿ ತೆಗೆದುಕೊಂಡು ಹೋಗುತ್ತಿದ್ದ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬಳಿಯ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ಉರುಳಿ ಬಿದ್ದ ಘಟನೆ ನಡೆದಿದೆ.
ಘಟನೆಯಿಂದ ಯಾವುದೇ ಪ್ರಾಣಾಪಾಯವಾಗಿಲ್ಲ. ಚಾಲಕನಿಗೆ ಸಣ್ಣ ಪುಟ್ಟ ಗಾಯಾಗಳಾಗಿದ್ದು, ಆತನ್ನು ಬೇಗೂರು ಆಸ್ಪತ್ರೆಗೆ ದಾಖಲಿಸಲಾಗಿದೆ.