×
Ad

ತುಳುನಾಡ ಧ್ವಜಧಾರಿ ಪ್ರಸಾದ್ ವಿಜಯ ಶೆಟ್ಟಿಗೆ ಸ್ವಾಗತ

Update: 2018-04-09 18:26 IST

ಮಂಗಳೂರು, ಎ.9: ತುಳು ಭಾಷೆಗೆ ರಾಷ್ಟ್ರೀಯ ಮಾನ್ಯತೆ ದೊರಕಲು ತುಳುನಾಡಿನ ಯುವಕರು ಜಾಗೃತರಾಗಬೇಕು. ಈ ನಿಟ್ಟಿನಲ್ಲಿ ತುಳುನಾಡಿನ ಧ್ವಜಧಾರಿಯಾಗಿ ಕಾಶ್ಮೀರದಿಂದ ಕನ್ಯಾಕುಮಾರಿ ತನಕ ನೆಲ್ಲಿಕಾರಿನ ಪ್ರಸಾದ್ ವಿಜಯ ಶೆಟ್ಟಿ ಸೈಕಲ್ ಸವಾರಿ ನಡೆಸಿರುವುದು ಶ್ಲಾಘನಾರ್ಹ ಎಂದು ತುಳು ಸಾಹಿತ್ಯ ಅಕಾಡಮಿ ಅಧ್ಯಕ್ಷ ಎ.ಸಿ ಭಂಡಾರಿ ಹೇಳಿದರು.

26 ವರ್ಷದ ಪ್ರಸಾದ್ ವಿಜಯ ಶೆಟ್ಟಿ 19 ದಿನಗಳಲ್ಲಿ ಕನ್ಯಾಕುಮಾರಿಯಿಂದ ಕಾಶ್ಮೀರದ ತನಕ ತುಳುನಾಡಿನ ಧ್ವಜ ಪ್ರದರ್ಶಿಸುತ್ತಾ ಸೈಕಲ್ ಸವಾರಿ ಮಾಡಿ ರವಿವಾರ ಮಂಗಳೂರು ತಲುಪಿದಾಗ ಉರ್ವಸ್ಟೋರ್ ತುಳುಭವನದಲ್ಲಿ ಅಕಾಡಮಿಯ ವತಿಯಿಂದ ಸಾಂಪ್ರಾದಾಯಕವಾಗಿ ಸ್ವಾಗತಿಸಿ ಅವರು ಮಾತನಾಡಿದರು.

2,500 ವರ್ಷಗಳ ಇತಿಹಾಸ ಹೊಂದಿರುವ ತುಳು ಭಾಷೆಗೆ ದೇಶದ ಸಂವಿಧಾನದಲ್ಲಿ ಮಾನ್ಯತೆ ದೊರಕಿಲ್ಲ. ಇತ್ತಿಚೆಗಿನ ದಿನಗಳಲ್ಲಿ ಸಾಂವಿಧಾನಿಕ ಮಾನ್ಯತೆಗಾಗಿ ವಿವಿಧ ರೀತಿಯಲ್ಲಿ ಒತ್ತಡ ಹಾಕಲಾಗುತ್ತಿದೆ. ತುಳುನಾಡಿನ ಜನತೆ ಭಿನ್ನ ರೀತಿಯಲ್ಲಿ ಕಾರ್ಯಕ್ರಮ ಆಯೋಜಿಸಿ ಭಾಷಾ ಮಾನ್ಯತೆಗಾಗಿ ಶ್ರಮಿಸುತ್ತಿದ್ದಾರೆ. ಯುವಕರು, ಸಾಹಿತಿಗಳು, ಸಂಘಟಕರು, ಹೋರಾಟಗಾರರು ತಮ್ಮದೇ ಆದ ರೀತಿಯಲ್ಲಿ ತುಳುನಾಡಿನ ಸ್ವಾಭಿಮಾನದ ರಕ್ಷಣೆ ಮಾಡುತ್ತಿದ್ದಾರೆ. ಅಕಾಡಮಿ ವತಿಯಿಂದ ಕಾನೂನಿನ ಚೌಕಟ್ಟಿಗೆ ಒಳಪಟ್ಟು ಸಹಕಾರ ನೀಡಲಾಗುತ್ತಿದೆ. ಎಲ್ಲರೂ ಒಂದಾಗಿ ಒಂದೇ ಉದ್ದೇಶಕ್ಕೆ ಚಳವಳಿ ನಡೆಸಿದಾಗ ಯಶಸ್ಸು ಸಿಗಲು ಸಾಧ್ಯವಿದೆ ಎಂದು ಎ.ಸಿ ಭಂಡಾರಿ ನುಡಿದರು.

ಅಕಾಮಿಯ ಮಾಜಿ ಅಧ್ಯಕ್ಷ ಡಾ. ವಾಮನ ನಂದಾವರ, ಸದಸ್ಯರಾದ ಡಾ. ವೈ.ಎನ್ ಶೆಟ್ಟಿ, ಡಾ. ವಾಸುದೇವ ಬೆಳ್ಳೆ, ಸುಧಾ ನಾಗೇಶ್, ರಿಜಿಸ್ಟ್ರಾರ್ ಚಂದ್ರಹಾಸ ರೈ.ಬಿ ಮತ್ತಿತರರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News