ಚುನಾವಣೆ ಅಕ್ರಮ ಪ್ರಕರಣ: 4.80 ಲಕ್ಷ ನಗದು ವಶಕ್ಕೆ

Update: 2018-04-09 13:47 GMT

ವಿಜಯಪುರ/ಬೆಂಗಳೂರು, ಎ.9: ದಾಖಲೆ ಇಲ್ಲದ 4.80 ಲಕ್ಷ ರೂ. ಹಣವನ್ನು ಕಾರಿನಲ್ಲಿ ಸಾಗಿಸುತ್ತಿದ್ದ ಆರೋಪದ ಮೇಲೆ ಗಾಂಧಿಚೌಕ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ವಿಜಯಪುರ ನಗರದ ಅಥಣಿ ರಸ್ತೆಯಲ್ಲಿ ಕಾರೊಂದನ್ನು ತಡೆದು ಚುನಾವಣಾ ಅಧಿಕಾರಿಗಳು ಪರಿಶೀಲನೆ ನಡೆಸಿದಾಗ ಅದರಲ್ಲಿದ್ದವರು ಅನುಮಾನಾಸ್ಪದ ರೀತಿಯಲ್ಲಿ ವರ್ತಿಸಿದ್ದಾರೆ. ತಕ್ಷಣ ಕಾರನ್ನು ಸಂಪೂರ್ಣ ತಪಾಸಣೆಗೊಳಪಡಿಸಿದಾಗ ಅಕ್ರಮವಾಗಿ ಹಣ ಸಾಗಣೆ ಮಾಡುತ್ತಿದ್ದುದು ಬೆಳಕಿಗೆ ಬಂದಿದೆ.

ಚುನಾವಣಾಧಿಕಾರಿ ಡಾ.ಆನಂದ ದೇವರನಾವದಗಿ ನೇತೃತ್ವದಲ್ಲಿ ಈ ಕಾರ್ಯಾಚರಣೆ ನಡೆಸಲಾಗಿದ್ದು, ಕಾರು ಹಾಗೂ ಹಣವನ್ನು ಜಪ್ತಿ ಮಾಡಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News