ಕರಾವಳಿ ಭಾಗದಲ್ಲಿ ಬಿಜೆಪಿ ಕಾರ್ಯಕರ್ತರ ಗಡಿಪಾರು: ಆರ್.ಅಶೋಕ್ ಆರೋಪ

Update: 2018-04-10 12:27 GMT

ಬೆಂಗಳೂರು, ಎ.10: ನೀತಿ ಸಂಹಿತೆಯ ನೆಪದಲ್ಲಿ ಪೊಲೀಸ್ ಅಧಿಕಾರಿಗಳು ಕರಾವಳಿ ಭಾಗದ ಬಿಜೆಪಿ ಕಾರ್ಯಕರ್ತರನ್ನು ಗಡಿಪಾರು ಮಾಡುತ್ತಿದ್ದಾರೆ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಆರೋಪಿಸಿದ್ದಾರೆ.

ಮಂಗಳವಾರ ಚುನಾವಣಾ ಆಯೋಗದ ಕಚೇರಿ ಬಳಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ತಮಗೆ ಬೇಕಾದ ಪೊಲೀಸ್ ಅಧಿಕಾರಿಗಳನ್ನು ಆಯಕಟ್ಟಿನ ಜಾಗದಲ್ಲಿ ನೇಮಿಸಿಕೊಂಡು, ಬಿಜೆಪಿ ಕಾರ್ಯಕರ್ತರಿಗೆ ಕಿರುಕುಳ ಕೊಡುತ್ತಿದ್ದಾರೆ. ಅದರ ಭಾಗವಾಗಿ ಕೊಡಗು, ದಕ್ಷಿಣಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಯ ಕಾರ್ಯಕರ್ತರನ್ನು ಗಡಿಪಾರು ಮಾಡುತ್ತಿದ್ದಾರೆ ಎಂದು ಕಿಡಿಕಾರಿದರು.

ಬಿಜೆಪಿ ಕಾರ್ಯಕರ್ತರು ತಮ್ಮ ಮನೆ, ಕಟ್ಟಡಗಳ ಮೇಲೆ ಹಾಕಿಕೊಂಡಿರುವ ಬಿಜೆಪಿ ಚಿಹ್ನೆ ಹಾಗೂ ಬರಹಗಳನ್ನು ಅಧಿಕಾರಿಗಳು ಅಳಿಸುತ್ತಿದ್ದಾರೆ. ತಮ್ಮ ಖಾಸಗಿ ಕಟ್ಟಡಗಳಲ್ಲಿ ಹಾಕಿಕೊಂಡಿರುವ ಪಕ್ಷದ ಚಿಹ್ನೆಯನ್ನು ನೋಟಿಸ್ ನೀಡದೆ ಅಳಿಸುವಂತಿಲ್ಲ. ಈ ಬಗ್ಗೆ ಮುಖ್ಯ ಚುನಾವಣಾಧಿಕಾರಿಯ ಗಮನಕ್ಕೆ ತಂದಿದ್ದೇವೆ ಎಂದು ಅವರು ಮಾಹಿತಿ ನೀಡಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News