ಎಸ್.ಎಂ.ಕೃಷ್ಣ ಕಾಂಗ್ರೆಸ್ ಸೇರುತ್ತಾರೆ ಎಂಬ ಸುದ್ದಿಯ ಬಗ್ಗೆ ಆರ್.ಅಶೋಕ್ ಹೇಳಿದ್ದೇನು?

Update: 2018-04-10 13:14 GMT

ಬೆಂಗಳೂರು, ಎ.10: ಹಿರಿಯ ರಾಜಕಾರಣಿ ಎಸ್.ಎಂ.ಕೃಷ್ಣ ಬಿಜೆಪಿ ಬಿಡಲ್ಲ. ಇದರಲ್ಲಿ ಯಾವುದೆ ಅನುಮಾನ ಬೇಡವೆಂದು ಬಿಜೆಪಿ ಮುಖಂಡ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.

ಮಂಗಳವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್.ಎಂ.ಕೃಷ್ಣ ಪುನಃ ಕಾಂಗ್ರೆಸ್‌ಗೆ ಸೇರಲಿದ್ದಾರೆ ಎಂಬುದು ಕಾಂಗ್ರೆಸ್ ನಾಯಕರು ಹರಡುತ್ತಿರುವ ವದಂತಿಯಷ್ಟೆ. ಇದರಲ್ಲಿ ಸತ್ಯಾಂಶವಿಲ್ಲ. ಯಾವುದೆ ಕಾರಣಕ್ಕೂ ಬಿಜೆಪಿ ಬಿಡುವುದಿಲ್ಲವೆಂದು ಎಸ್.ಎಂ.ಕೃಷ್ಣರವರೆ ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದರು.

ಎಸ್.ಎಂ.ಕೃಷ್ಣಗೆ ಟಿಕೆಟ್: ಹಿರಿಯ ನಾಯಕ ಎಸ್.ಎಂ.ಕೃಷ್ಣ ಇಲ್ಲವೆ ಅವರ ಕುಟುಂಬದವರಿಗೆ ಟಿಕೆಟ್ ನೀಡಲು ಬಿಜೆಪಿ ಸಿದ್ಧವಿದೆ. ಅವರು ಸೂಚಿಸುವ ಕ್ಷೇತ್ರದಲ್ಲಿಯೆ ಟಿಕೆಟ್ ನೀಡಲಾಗುವುದು. ಇದರಲ್ಲಿ ಯಾವುದೆ ಗೊಂದಲವಿಲ್ಲವೆಂದು ಅವರು ಹೇಳಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News