​ಬೆಂಗಳೂರು: ಟಿಪ್ಪರ್ ಢಿಕ್ಕಿ; ಇಬ್ಬರು ಬೈಕ್ ಸವಾರರು ಮೃತ್ಯು

Update: 2018-04-10 15:00 GMT

ಬೆಂಗಳೂರು, ಎ.10: ವೇಗವಾಗಿ ಬಂದ ಟಿಪ್ಪರ್ ಲಾರಿ ಢಿಕ್ಕಿ ಹೊಡೆದ ಪರಿಣಾಮ ಬೈಕ್‌ನಲ್ಲಿ ಹೋಗುತ್ತಿದ್ದ ಇಬ್ಬರು ಯುವಕರು ಮೃತಪಟ್ಟಿರುವ ದಾರುಣ ಘಟನೆ ಇಲ್ಲಿನ ಬ್ಯಾಡರಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಬೆಂಗಳೂರು ಹೊರವಲಯದ ಬ್ಯಾಡರಹಳ್ಳಿಯ ವಿಘ್ನೇಶ್ವರ ನಗರದ ಉಮೇಶ್(20) ಮತ್ತು ಗೌತಮ್(20) ಮೃತಪಟ್ಟವರು ಎಂದು ಪೊಲೀಸರು ಗುರುತಿಸಿದ್ದಾರೆ.

ಆ್ಯಂಬುಲೆನ್ಸ್‌ನಲ್ಲಿ ಕೆಲಸ ಮಾಡುತ್ತಿದ್ದ ಇವರಿಬ್ಬರೂ ಸೋಮವಾರ ರಾತ್ರಿ 10:30ರ ಸುಮಾರಿಗೆ ಕೆಲಸ ಮುಗಿಸಿಕೊಂಡು ಮನೆಗೆ ಬೈಕ್‌ನಲ್ಲಿ ಹೋಗುತ್ತಿದ್ದರು. ಈ ವೇಳೆ ಮುದ್ದಿನಪಾಳ್ಯದ ಪೆಟ್ರೋಲ್ ಬಂಕ್ ಬಳಿ ವೇಗವಾಗಿ ಟಿಪ್ಪರ್ ಲಾರಿ ಬಂದು ಢಿಕ್ಕಿ ಹೊಡೆದ ರಭಸಕ್ಕೆ ಇಬ್ಬರು ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಪ್ರಕರಣ ಸಂಬಂಧ ಬ್ಯಾಡರಹಳ್ಳಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಪ್ರಕರಣವನ್ನು ದಾಖಲಿಸಿ ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News