×
Ad

ಉಡುಪಿ: ​ಸಾಗರ ಕವಚ ಅಣಕು ಕಾರ್ಯಾಚರಣೆ

Update: 2018-04-11 20:02 IST

ಉಡುಪಿ, ಎ.11: ಭಯೋತ್ಪಾದಕ ದಾಳಿಗಳನ್ನು ಹಾಗೂ ಇತ ವಿದ್ವಂಸಕ ಕೃತ್ಯಗಳನ್ನು ತಡೆಗಟ್ಟಲು ಯಾವ ರೀತಿ ಮುಂಜಾಗ್ರತಾ ಕ್ರಮಗಳನ್ನು ಅನುಸರಿಸಬೇಕು ಮತ್ತು ಭದ್ರತಾ ದೃಷ್ಠಿಯಿಂದ ಈಗಿರುವ ರಕ್ಷಣಾ ಕ್ರಮಗಳು ಮತ್ತು ಸಿದ್ದತೆಗಳು ಎಷ್ಟು ಸಮರ್ಥವಾಗಿವೆ ಎಂಬುದನ್ನುಸ್ವಯಂ ವೌಲ್ಯಮಾಪನ ಮಾಡಿಕೊಳ್ಳುವ ಉದ್ದೇಶದಿಂದ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ಎ.11 ಮತ್ತು 12ರಂದು ಉಡುಪಿ ಜಿಲ್ಲೆಯಾದ್ಯಂತ ಜಿಲ್ಲಾಡಳಿತ ಹಾಗೂ ಪೊಲೀಸ್ ಇಲಾಖೆಗಳ ಜಂಟಿ ಸಹಬಾಗಿತ್ವದಲ್ಲಿ ಆಯೋಜಿಸಲಾಗಿದೆ.

ಇದರ ಮುಖ್ಯ ಉದ್ದೇಶ ರಕ್ಷಣಾ ಸಾಮರ್ಥ್ಯವನ್ನು ಸನ್ನದ್ದಗೊಳಿಸುವುದು ಮತ್ತು ವಿವಿಧ ಇಲಾಖೆಗಳು ಮತ್ತು ಸಂಸ್ಥೆಗಳ ನಡುವಿನ ಸಾಮರಸ್ಯವನ್ನು ವೃದ್ದಿಸಲು ಹಾಗೂ ಪ್ರಸ್ತುತ ಇರುವ ಸಾಮರ್ಥ್ಯವನ್ನು ಉನ್ನತೀಕರಣಗೊಳಿಸುವ ಉದ್ದೇಶದಿಂದ ಸಾಗರ ಕವಚ ಅಣಕು ಕಾರ್ಯಾಚರಣೆಯನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ.

ಕಾಯಾಚರಣೆ ಕೇವಲ ಅಣಕು ಕಾರ್ಯಾಚರಣೆಯಾಗಿರುತ್ತದೆ. ಇದೊಂದು ಅರಿವು ಮೂಡಿಸುವ ಕಾರ್ಯವಾಗಿದ್ದು, ಇದರಲ್ಲಿ ಎಲ್ಲಾ ಸಾರ್ವಜನಿಕರು, ಸಂಘ ಸಂಸ್ಥೆಗಳು, ವಿವಿಧ ಇಲಾಖೆಗಳ ಅಧಿಕಾರಿಗಳು ಪಾಲ್ಗೊಳ್ಳಲಿದ್ದಾರೆ.

ಈ ಅಣಕು ಪ್ರದರ್ಶನವು ಸಾರ್ವಜನಿಕ ಸ್ಥಳಗಳಾದ ಪ್ರಾರ್ಥನಾ ಮಂದಿರ, ಪ್ರತಿಷ್ಠಿತ ಶಾಲೆ/ಕಾಲೇಜ್‌ಗಳಲ್ಲಿ ರೈಲು ನಿಲ್ದಾಣ, ಬಸ್ ನಿಲ್ದಾಣ , ಬೀಚ್, ಬಂದರು, ಕಡಲ ಕಿನಾರೆಗಳಲ್ಲಿ, ಪ್ರಮುಖ ರಸ್ತೆಗಳಲ್ಲಿ ಹಾಗೂ ಇತರೆ ಪ್ರಮುಖ ಸ್ಥಳಗಳಲ್ಲಿ ನಡೆಸಲಾಗುತ್ತದೆ. ಈ ಸಂದರ್ಭದಲ್ಲಿ ಪೊಲೀಸ್ ಇಲಾಖೆಯವರು ಸಾರ್ವಜನಿಕರ ಹಾಗೂ ವಾಹನಗಳನ್ನು ತಪಾಸಣೆ ನಡೆಸಲಿದ್ದಾರೆ.

ಇದಕ್ಕೆ ಸಾರ್ವಜನಿಕರು ಸಹಕಾರ ನೀಡುವಂತೆ ಹಾಗೂ ಅಪರಿಚಿತ ಗುರುತು ಪರಿಚಯ ಇಲ್ಲದ ಸಂಶಯಾಸ್ಪದ ವ್ಯಕ್ತಿಗಳ ಹಾಗೂ ಸಂಶಯಾಸ್ಪದ ವಸ್ತುಗಳು ಸ್ಥಳದಲ್ಲಿ ದೊರೆತಲ್ಲಿ ಯಾವುದೇ ರೀತಿಯಲ್ಲಿ ಭಯಭೀತರಾಗದೆ ಸಮೀಪದ ಪೊಲೀಸ್ ಠಾಣೆ ಅಥವಾ ಪೊಲೀಸ್ ಅಧೀಕ್ಷಕರ ಕಚೇರಿ ಉಡುಪಿ, ಕಂಟ್ರೋಲ್ ರೂಂ ದೂರವಾಣಿ ಸಂ.100, ಪೊಲೀಸ್ ಅಧೀಕ್ಷಕರು ಕರಾವಳಿ ಕಾವಲು ಪಡೆ ಕಂಟ್ರೋಲ್ ರೂಂ 1093, ಜಿಲ್ಲಾಧಿಕಾರಿ ಕಚೇರಿಯ ಕಂಟ್ರೋಲ್ ರೂಂ 1077/2574802ಗೆ ಮಾಹಿತಿ ನೀಡುವಂತೆ ಉಡುಪಿ ಅಪರ ಜಿಲ್ಲಾಧಿಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News