ಕಾರವಾರ: ನಿಂತಿದ್ದ ಲಾರಿಗೆ ಬೈಕ್ ಢಿಕ್ಕಿ; ಇಬ್ಬರು ಸ್ಥಳದಲ್ಲೇ ಮೃತ್ಯು

Update: 2018-04-11 17:16 GMT

ಕಾರವಾರ, ಎ. 11: ನಿಂತಿದ್ದ ಲಾರಿಗೆ ಹಿಂಬದಿಯಿಂದ ಬೈಕ್ ಸವಾರರು ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಮಾಜಾಳಿಯ ಗಾಂವಗೇರಿ ಕ್ರಾಸ್ ಬಳಿ ಬುಧವಾರ ರಾತ್ರಿ ಸಂಭವಿಸಿದೆ.

ಸರಕಾರಿ ಎಂಜಿನಿಯರಿಂಗ್ ಕಾಲೇಜಿನ ವಿದ್ಯಾರ್ಥಿಗಳಾದ ಕಾರವಾರ ತಾಲೂಕಿನ ಶಿರವಾಡದ ಶಿವರಾಜ್ (21) ಹಾಗೂ ಮೂಲತಃ ಶಿವಮೊಗ್ಗ ಜಿಲ್ಲೆಯ ಚೇತನ ಮೃತಪಟ್ಟವರು ಎಂದು ಗುರುತಿಸಲಾಗಿದೆ.

ಗಾಂವಗೇರಿ ಕ್ರಾಸ್ ಬಳಿ ಪಂಚರ್ ಆಗಿದ್ದ ಲಾರಿಯ ದುರಸ್ತಿ ನಡೆಯುತ್ತಿತ್ತು. ಅದೇ ಸಂದರ್ಭದಲ್ಲಿ ಗೋವಾ ಕಡೆಯಿಂದ ಆಗಮಿಸಿದ ಬೈಕ್ ಸವಾರರು ಲಾರಿಗೆ ಹಿಂಬದಿಯಿಂದ  ಢಿಕ್ಕಿ ಹೊಡೆದಿದ್ದಾರೆ. ಇದರಿಂದಾಗ ತೀವ್ರ ರಕ್ತಸ್ರಾವಗೊಂಡು ಬೈಕ್ ಸವಾರರಿಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಈ ಬಗ್ಗೆ ಚಿತ್ತಾಕುಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News