ಸದಾಶಿವ ಪೂಜಾರಿ

Update: 2018-04-12 17:32 GMT

ಉಳ್ಳಾಲ, ಎ.12: ಉಳ್ಳಾಲ ಬಂಡಿಕೊಟ್ಯದ ಶ್ರೀ ಕ್ಷೇತ್ರ ಕೊಟ್ಟಾರಸ್ಥಾನ ಶ್ರೀ ಮಲರಾಯ ದೇವಸ್ಥಾನದ ಧರ್ಮದರ್ಶಿ ಮುಂಡ ಯಾನೆ ಸದಾಶಿವ ಪೂಜಾರಿ (87) ಬುಧವಾರ  ನಿಧನರಾದರು. ಮೃತರು ಪತ್ನಿ ಇಬ್ಬರು ಪುತ್ರರು, ಮೂವರು ಪುತ್ರಿಯರನ್ನು ಅಗಲಿದ್ದಾರೆ.

ಶ್ರೀ ಕ್ಷೇತ್ರದಲ್ಲಿ ಕಳೆದ 71 ವರ್ಷಗಳಿಂದ ಧರ್ಮದರ್ಶಿಯಾಗಿ ಸೇವೆಸಲ್ಲಿಸಿದ್ದು, ಬಂಡಿಕೊಟ್ಯದ ಬ್ರಹ್ಮಶ್ರೀ ನಾರಾಯಣ ಗುರು ಸಂಘ ಇದರ ಅಧ್ಯಕ್ಷರಾಗಿ ಕಾರ್ಯ ನಿರ್ವಹಿಸಿದ್ದರು. ಧಾರ್ಮಿಕ, ಸಾಮಾಜಿಕವಾಗಿ ತೊಡಗಿಸಿಕೊಂಡಿದ್ದರು. ಮೃತರ ಅಂತ್ಯಕ್ರಿಯೆ ಧಾರ್ಮಿಕ ವಿಧಿ ವಿಧಾನಗಳು ಶ್ರೀ ಕ್ಷೇತ್ರದ ವಠಾರದಲ್ಲಿ ನಡೆಯಿತು.

ಮೃತರ ಅಂತ್ಯಕ್ರಿಯೆಯಲ್ಲಿ  ಸಚಿವ ಯು.ಟಿ. ಖಾದರ್, ಸಂತೋಷ್ ಕುಮಾರ್ ರೈ ಬೋಳಿಯಾರ್, ಸದಾಶಿವ ಉಳ್ಳಾಲ್, ಸತೀಶ್ ಕುಂಪಲ, ಚಂದ್ರಶೇಖರ ಉಚ್ಚಿಲ್, ಶ್ರೀ ಮಲರಾಯ ದೇವಸ್ಥಾನದ ಆಡಳಿತ ಮೊಕ್ತೇಸರ ಉಳ್ಳಾಲ ಸುಂದರ ಮತ್ತಿತರ ಗಣ್ಯರು ಭಾಗವಹಿಸಿ ಸಂತಾಪ ವ್ಯಕ್ತಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News

ವಸಂತಿ