ಇಶ್ರತ್ ಜಹಾನ್ ನಕಲಿ ಎನ್‍ಕೌಂಟರ್ ಪ್ರಕರಣದ ಅರ್ಜಿದಾರ ರಸ್ತೆ ಅಪಘಾತದಲ್ಲಿ ಮೃತ್ಯು

Update: 2018-04-13 11:27 GMT

ತಿರುವನಂತಪುರಂ, ಎ.13: ಇಶ್ರತ್ ಜಹಾನ್ ನಕಲಿ ಎನ್‍ಕೌಂಟರ್ ಪ್ರಕರಣದಲ್ಲಿ ದಾವೆ ಹೂಡಿದ್ದ ಅರ್ಜಿದಾರ ಗೋಪಿನಾಥ್ ಪಿಳ್ಳೈ ಕೇರಳದ ಅಳಪ್ಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ.

ಅವರು ಮುಂಜಾನೆ 2 ಗಂಟೆಗೆ ಮೃತಪಟ್ಟಿದ್ದಾರೆ ಎಂದು ಕುಟುಂಬದ ಮೂಲಗಳು ಹೇಳಿವೆ. ಪಿಳ್ಳೈ ಅವರು ಪ್ರಾಣೇಶ್ ಅಲಿಯಾಸ್ ಜಾವೇದ್ ಶೇಖ್ ಅವರ ತಂದೆ. ಇಶ್ರತ್ ಜಹಾನ್, ಶೇಖ್ ಹಾಗೂ ಇತರ ಇಬ್ಬರನ್ನು ಗುಜರಾತ್ ಪೊಲೀಸರು ಗುಂಡಿಟ್ಟು ಹತ್ಯೆ ಮಾಡಿದ್ದರು.

ಈ ಮಧ್ಯೆ ಅಹ್ಮದಾಬಾದ್ ಸಿಬಿಐ ವಿಶೇಷ ನ್ಯಾಯಾಲಯ ಪ್ರಕರಣದ ತನಿಖೆಯನ್ನು ಮುಂದೂಡಿದೆ. ಐಪಿಎಸ್ ಅಧಿಕಾರಿ ಡಿ.ಜಿ.ವಂಝಾರಾ ಹಾಗೂ ಮಾಜಿ ಎಸ್ಪಿ ಎನ್.ಕೆ.ಅಮಿನ್ ಅವರು ಸಲ್ಲಿಸಿದ ಮನವಿಗೆ ಸ್ಪಂದಿಸಲು ಸಿಬಿಐ ಕಾಲಾವಕಾಶ ಕೋರಿದ ಹಿನ್ನೆಲೆಯಲ್ಲಿ ಪ್ರಕರಣ ಮುಂದೂಡಲಾಗಿದೆ. ಕಳೆದ ಫೆಬ್ರವರಿಯಲ್ಲಿ ಸಿಬಿಐ ವಿಶೇಷ ನ್ಯಾಯಾಲಯ, ಗುಜರಾತ್ ಡಿಜಿಪಿ ಪಿ.ಪಿ.ಪಾಂಡೆ ಅವರನ್ನು ನಕಲಿ ಎನ್‍ಕೌಂಟರ್ ಪ್ರಕರಣದ ಆರೋಪದಿಂದ ಮುಕ್ತಗೊಳಿಸಿತ್ತು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News