ಎನ್ ಎ ಹಾರೀಸ್ ಗೆ 2 ದಿನದಲ್ಲಿ ಟಿಕೆಟ್ : ಸಿದ್ದರಾಮಯ್ಯ

Update: 2018-04-16 04:31 GMT

ಬೆಂಗಳೂರು, ಎ.16: ಶಾಂತಿನಗರ ಶಾಸಕ ಎನ್.ಎ.ಹಾರೀಸ್ ಗೆ ಎರಡು ದಿನಗಳ ಒಳಗಾಗಿ ಟಿಕೆಟ್ ಸಿಗುವ ಸಾಧ್ಯತೆ ಇದೆ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು 218 ಕ್ಷೇತ್ರ ಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಂಡಿದೆ. ಇನ್ನೂ ಆರು ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಪ್ರಕಟಗೊಳ್ಳಲು ಬಾಕಿ ಇದೆ. 2-3 ದಿನಗಳ ಒಳಗಾಗಿ ಉಳಿದ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಹೆಸರು ಪ್ರಕಟಗೊಳ್ಳಲಿದೆ ಎಂದರು.

ಸರ್ವೆ ಆಧಾರದಲ್ಲಿ  ಕಾಂಗ್ರೆಸ್ ಟಿಕೆಟ್ ಹಂಚಿಕೆ ಮಾಡಲಾಗಿದೆ. ಟಿಕೆಟ್ ಸಿಗದಕ್ಕೆ ಯಾರಿಂದಲೂ ಬಂಡಾಯವಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News