ಎ.20 ರಂದು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸಿಎಂ ನಾಮಪತ್ರ ಸಲ್ಲಿಕೆ
Update: 2018-04-16 05:57 GMT
ಮೈಸೂರು, ಎ.16: ಚಾಮುಂಡೇಶ್ವರಿ ವಿಧಾನ ಸಭಾ ಕ್ಷೇತ್ರದಿಂದ ವಿಧಾನಸಭೆಗೆ ಆಯ್ಕೆ ಬಯಸಿರುವ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು ಎ.20ರಂದು ನಾಮಪತ್ರ ಸಲ್ಲಿಸಲಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿ ನಾನು ಬಾದಾಮಿಯಿಂದ ಸ್ಪರ್ಧಿಸುವುದಾಗಿ ಎಲ್ಲಿಯೂ ಹೇಳಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಿಂದ ಮಾತ್ರ ಸ್ಪರ್ಧಿಸುತ್ತೇನೆ’’ ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಸಿದ್ದರಾಮಯ್ಯ ರಾಮನಗರ ಕ್ಷೇತ್ರದಲ್ಲಿ ಒಂದು ತಿಂಗಳು ಬೇಕಾದರೂ ಪ್ರಚಾರ ಮಾಡಲಿ, ತಾವು ಒಂದು ದಿನವೂ ಪ್ರಚಾರ ಮಾಡದೇ ಗೆಲ್ಲುತ್ತೇನೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆಗೆ ತಿರುಗೇಟು ನೀಡಿದ ಸಿದ್ದರಾಮಯ್ಯ ಅವರು “ವೋಟುಗಳು ಕುಮಾರಸ್ವಾಮಿ ಅವರ ಜೇಬಿನಲ್ಲಿ ಇಲ್ಲ. ಅವರು ಅಂತಹ ಹೇಳಿಕೆ ನೀಡಬಾರದಿತ್ತು. ಹಾಗಿದ್ದರೆ ಅವರು ಯಾಕೆ ಹಿಂದೆ ಚಿಕ್ಕಬಳ್ಳಾಪುರದಲ್ಲಿ ಸೋತರು. ಅವರ ಹೆಂಡತಿ ಹೇಗೆ ಸೋತರು’’ ಎಂದು ಪ್ರಶ್ನಿಸಿದರು.