ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಲಿ: ರಾಜೀನಾಮೆ ನೀಡಿದ ಬಿಜೆಪಿ ಸಚಿವರ ಒತ್ತಾಯ

Update: 2018-04-16 10:44 GMT

ಜಮ್ಮು, ಎ.16: ಕಥುವಾ ಅತ್ಯಾಚಾರ, ಕೊಲೆ ಪ್ರಕರಣದ ಆರೋಪಿಯನ್ನು ಬೆಂಬಲಿಸಿ ರ್ಯಾಲಿ ನಡೆಸಿದ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ರಾಜೀನಾಮೆ ನೀಡಿದ್ದ ಜಮ್ಮು ಕಾಶ್ಮೀರ ಮಾಜಿ ಸಚಿವ ಲಾಲ್ ಸಿಂಗ್ ರಾಜ್ಯದ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಬೇಕೆಂದು ಆಗ್ರಹಿಸಿದ್ದಾರೆ.

ಕಥುವಾ ಪ್ರಕರಣದಲ್ಲಿ ಆರೋಪಿಗಳ ಪರ ನಡೆದಿದ್ದ ರ್ಯಾಲಿಯಲ್ಲಿ ಮಾಜಿ ಅರಣ್ಯ ಸಚಿವ ಲಾಲ್ ಸಿಂಗ್ ಹಾಗು ಕೈಗಾರಿಕ ಸಚಿವ ಚಂದ್ರಪ್ರಕಾಶ್ ಗಂಗಾ ಪಾಲ್ಗೊಂಡಿದ್ದರು. ಈ ಬಗ್ಗೆ ತೀವ್ರ ಆಕ್ರೋಶ ವ್ಯಕ್ತವಾದ ನಂತರ ಇಬ್ಬರೂ ರಾಜೀನಾಮೆ ನೀಡಿದ್ದರು.

“ಮೆಹಬೂಬಾ ಮುಫ್ತಿ ಆತ್ಮಾವಲೋಕನ ಮಾಡಿಕೊಳ್ಳಬೇಕು. ಇಬ್ಬರು ಸಚಿವರು ಮಾಡಿದ್ದಾದರೂ ಏನು?, ನಾವು ಈಗಾಗಲೇ ರಾಜೀನಾಮೆ ಸಲ್ಲಿಸಿದ್ದೇವೆ. ನಾವೂ ಕೂಡ ಬಾಲಕಿಯ ಹಿತ ಬಯಸುವವರೇ. ಆಕೆಗೆ ನ್ಯಾಯ ಸಿಗಬೇಕೆಂದು ನಾವೂ ಬಯಸುತ್ತೇವೆ. ಈ ಪ್ರಕರಣಕ್ಕೆ ಸಂಬಂಧಿಸಿ ನೈತಿಕ ಹೊಣೆಹೊತ್ತು ಮೆಹಬೂಬಾ ಮುಫ್ತಿ ರಾಜೀನಾಮೆ ನೀಡಬೇಕು” ಎಂದು ಲಾಲ್ ಸಿಂಗ್ ಒತ್ತಾಯಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News