ಮುನಿಯಾಲುಗೆ ತಪ್ಪಿದ ಟಿಕೆಟ್: ಗ್ರಾಮೀಣ ಬಂಟರ ಸಂಘ ಅಸಮಾಧಾನ

Update: 2018-04-17 14:46 GMT

ಉಡುಪಿ, ಎ.17: ಕಾರ್ಕಳ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್‌ನ ಉಪಾಧ್ಯಕ್ಷ ಮುನಿಯಾಲು ಉದಯ್ ಕುಮಾರ್ ಶೆಟ್ಟಿಗೆ ಟಿಕೆಟ್ ಸಿಗುವುದು ಬಹುತೇಕ ಖಚಿತವಾಗಿದ್ದರೂ ಕೊನೆ ಕ್ಷಣದಲ್ಲಿ ಆದ ಬದಲಾವಣೆಗೆ ಬೇಸರ ಆಗಿದೆ ಎಂದು ಉಡುಪಿ ಜಿಲ್ಲಾ ಗ್ರಾಮೀಣ ಬಂಟರ ಸಂಘ ತಿಳಿಸಿದೆ.

ಉದಯ ಕುಮಾರ್ ಶೆಟ್ಟಿ ಈಗಾಗಲೇ ಕಾರ್ಕಳ ಕ್ಷೇತ್ರದಲ್ಲಿ ತಳ ಮಟ್ಟದಿಂದ ಕಾರ್ಯಕರ್ತರನ್ನು ಒಗ್ಗೂಡಿಸಿ ಪಕ್ಷ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. ಆದರೆ ಅವರಿಗೆ ಟಿಕೆಟ್ ನೀಡದೆ ಅನ್ಯಾಯ ಎಸಗಲಾಗಿದೆ. ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷವು ಬಂಟ ಸಮುದಾಯವನ್ನು ಹಲವು ವರ್ಷಗಳಿಂದ ಪಕ್ಷಕ್ಕಾಗಿ ದುಡಿಸಿಕೊಳ್ಳುತ್ತಿದೆ. ಆದರೆ ಚುನಾವಣೆಯಲ್ಲಿ ಸ್ಪರ್ಧಿಸುವ ಅಪೇಕ್ಷೆ ವ್ಯಕ್ತಪಡಿಸುವ ಸಂದರ್ಭ ದ್ರೋಹ ಬಗೆಯಲಾಗುತ್ತದೆ. ಈ ಧೋರಣೆಗೆ ಬಂಟ ಸಮುದಾಯ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದೆ ಎಂದು ಸಂಘ ಅಧ್ಯಕ್ಷ ಸಖಾ ರಾಮ್ ಶೆಟ್ಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News