ಬಸ್ ಢಿಕ್ಕಿ : ಬೈಕ್ ಸವಾರ ಗಂಭೀರ

Update: 2018-04-17 15:04 GMT

ಮುಂಡಗೋಡ,ಎ.17 : ಬಸ್ ಬೈಕ್ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ ಬೈಕ್ ಸವಾರ ಗಂಭೀರವಾಗಿಗೊಂಡ ಘಟನೆ ಮಂಗಳವಾರ ಸಂಜೆ ಸಂಭವಿಸಿದೆ. ರಾಜು ವೆಂಕಪ್ಪ ಲಮಾಣಿ(33) ಗಂಭೀರವಾಗಿ ಗಾಯಗೊಂಡವರು.

ಹುಬ್ಬಳ್ಳಿ ಶಿರಸಿ ರಸ್ತೆಯ ಜೋಗೆಶ್ವರ ಹಳ್ಳದ ಹತ್ತಿರ ಢಿಕ್ಕಿ ಸಂಭವಿಸಿದ್ದು, ಬಸ್ ಶಿರಸಿಯಿಂದ ಹುಬ್ಬಳ್ಳಿಗೆ ಹಾಗೂ ಬೈಕ್ ಸವಾರ ಶಿರಸಿ ಕಡೆಗೆ ಹೊರಟಿದ್ದರು ಎನ್ನಲಾಗಿದೆ.

ಬೈಕ್ ಸವಾರನಿಗೆ ಗಂಭೀರವಾದ ಗಾಯವಾಗಿದ್ದು ಗಾಯಾಳುವನ್ನು ಹುಬ್ಬಳ್ಳಿ ಕಿಮ್ಸ್ ಗೆ ದಾಖಲಿಸಲಾಗಿದೆ ಎಂದು ಹೇಳಲಾಗಿದೆ.
ಈ ಕುರಿತು ಮುಂಡಗೋಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News