ಶೋಭಾರಿಗೆ ಏನೋ ಸಮಸ್ಯೆ ಇದೆ, ವೈದ್ಯರ ಬಳಿ ಪರೀಕ್ಷಿಸಿಕೊಳ್ಳಲಿ: ಡಿ.ಕೆ. ಶಿವಕುಮಾರ್

Update: 2018-04-18 13:38 GMT

ಬೆಂಗಳೂರು, ಎ. 18: ‘ಬಸವಣ್ಣನವರ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಯೋಗ್ಯತೆ ಸಿದ್ದರಾಮಯ್ಯನವರಿಗಿಲ್ಲ’ ಎಂದು ಹೇಳಿಕೆ ನೀಡಿರುವ ಸಂಸದೆ ಶೋಭಾ ಕರಂದ್ಲಾಜೆ ಅವರಿಗೆ ಏನೋ ಸಮಸ್ಯೆ ಇದೆ. ಮೊದಲು ವೈದ್ಯರ ಬಳಿ ಪರೀಕ್ಷಿಸಿಕೊಳ್ಳಲಿ ಎಂದು ಇಂಧನ ಸಚಿವ ಡಿ.ಕೆ.ಶಿವಕುಮಾರ್ ತಿರುಗೇಟು ನೀಡಿದ್ದಾರೆ.

ಬುಧವಾರ ಇಲ್ಲಿನ ಬಸವೇಶ್ವರ ವೃತ್ತದಲ್ಲಿನ ಬಸವಣ್ಣನ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ಬಳಿಕ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, ಶೋಭಾ ಹೇಳಿಕೆ ಖಂಡನೀಯ. ಸಿದ್ದರಾಮಯ್ಯನವರು ಬಸವೇಶ್ವರ ಜಯಂತಿ ದಿನವೇ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಿದರು. ಅವರು ಕಟ್ಟಾ ಬಸವಣ್ಣನವರ ಅನುಯಾಯಿ ಎಂದು ಸಮರ್ಥಿಸಿಕೊಂಡರು.

ಕಾಂಗ್ರೆಸ್ ಪಕ್ಷವೂ ಬಸವಣ್ಣನವರ ತತ್ವ-ಸಿದ್ದಾಂತಗಳ ಮೇಲೆ ನಂಬಿಕೆ ಇಟ್ಟಿದೆ ಮತ್ತು ಅದೇ ಮಾರ್ಗದಲ್ಲಿ ನಡೆಯುತ್ತಿದೆ. ಸರಕಾರ ಬಸವಣ್ಣನವರ ಆದರ್ಶಗಳಂತೆ ಕಾರ್ಯಕ್ರಮಗಳನ್ನು ರೂಪಿಸಿದೆ. ಸರಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದೇ ನಮ್ಮ ಸರಕಾರ ಎಂದು ಅವರು ತಿಳಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News