ಮಂಗಳೂರು: ಎರಡು ಕ್ಷೇತ್ರಗಳಲ್ಲಿ ಸಿಪಿಐ ಸ್ಪರ್ಧೆ

Update: 2018-04-19 12:01 GMT

ಮಂಗಳೂರು, ಎ. 19: ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಭಾರತ ಕಮ್ಯುನಿಸ್ಟ್ ಪಕ್ಷ (ಸಿಪಿಐ) ಶಿರಾ ಮತ್ತು ಕೂಡ್ಲಗಿ ಕ್ಷೇತ್ರಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಜಿಲ್ಲಾ ಸಮಿತಿ ತಿಳಿಸಿದೆ.ಉಳಿದ ಕ್ಷೇತ್ರಗಳಲ್ಲಿ ಬಿಜೆಪಿಯನ್ನು ಸೋಲಿಸುವ ಸಮರ್ಥ ಜಾತ್ಯಾತೀತ ಅಭ್ಯರ್ಥಿಯನ್ನು ಬೆಂಬಲಿಸಲು ತೀರ್ಮಾನಿಸಿದೆ.

ಬಾಗೆಪಲ್ಲಿ ಮತ್ತು ಗುಲ್ಬರ್ಗಾ ದಕ್ಷಿಣ ಕ್ಷೇತ್ರದಲ್ಲಿ ಸಿಪಿಎಂ ಅಭ್ಯರ್ಥಿಗಳನ್ನು ಬೆಂಬಲಿಸಲಿದ್ದು, ದಕ್ಷಿಣ ಕನ್ನಡ ಸೇರಿದಂತೆ ಇತರ ಎಲ್ಲಾ ಕಡೆಗಳಲ್ಲಿ ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಲು ಪಕ್ಷದ ಕರ್ನಾಟಕ ರಾಜ್ಯ ಮಂಡಳಿ ತೀರ್ಮಾನಿಸಿದೆ ಎಂದು ಭಾರತ ಕಮ್ಯುನಿಸ್ಟ್ ಪಕ್ಷದ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಕಾರ್ಯದರ್ಶಿ ವಿ. ಕುಕ್ಯಾನ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಎಪ್ರಿಲ್ 19 ಸನ್ಮಾನ

ಶ್ರೀ ಸುಬ್ರಹ್ಮಣ್ಯ ಮಠದ ಪೀಠಾಧೀಶ ಶ್ರೀ ವಿದ್ಯಾಪ್ರಸನ್ನ ತೀರ್ಥ ಸ್ವಾಮೀಜಿ ಅವರಿಗೆ ತುಳು ಲಿಪಿಯ ಪ್ರಥಮ ಗ್ರಂಥ-ಶ್ರೀಹರಿಸ್ತುತಿಯನ್ನು ಮಾಸ್ಟರ್ ನಿಷ್ಕಲ್ ಹಾಗೂ ಮಾಸ್ಟರ್ ನಿಶ್ಚಿತ್ ರಾವ್ ಅವರಿಬ್ಬರು ಸಮರ್ಪಿಸಿದ ಸಂದರ್ಭದಲ್ಲಿ ಸ್ವಾಮೀಜಿಯವರು ಶ್ರೀ ಮಠದ ವತಿಯಿಂದ ಶಾಲು ಹೊದಿಸಿ ಸನ್ಮಾನಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News