ತೊಕ್ಕೊಟ್ಟು; ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟ: ಇಬ್ಬರಿಗೆ ಗಂಭೀರ ಗಾಯ
Update: 2018-04-19 13:04 GMT
ಉಳ್ಳಾಲ, ಎ.19 : ತೊಕ್ಕೊಟ್ಟು ಚೆಂಬುಗುಡ್ಡೆ ಮಸೀದಿ ಬಳಿಯ ಗ್ಯಾರೇಜ್ ಒಂದರಲ್ಲಿ ಆಕಸ್ಮಿಕವಾಗಿ ಗ್ಯಾಸ್ ವೆಲ್ಡಿಂಗ್ ಸಿಲಿಂಡರ್ ಸ್ಫೋಟಿಸಿದ ಪರಿಣಾಮ ಇಬ್ಬರು ಗಂಭೀರ ಗಾಯಗೊಂಡ ಘಟನೆ ಗುರುವಾರ ಸಂಜೆ ನಡೆದಿದೆ.
ಲತೀಶ್ (55), ನವೀನ್ ಆಚಾರಿ(30) ಗಂಭೀರ ಗಾಯಗೊಂಡ ಕಾರ್ಮಿಕರು ಎಂದು ಗುರುತಿಸಲಾಗಿದೆ. ಇನ್ನೋರ್ವ ಅರ್ಫಾಣ್ (22) ಎಂಬವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.
ಗಾಯಾಳುಗಳನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ದಾಖಲಿಸಲಾಗಿದೆ.